Categories: Main News

ಸಾಮಾಜಿಕ ಜಾಲತಾಣಕ್ಕೆ ದಾಸ್ಯದಿಂದ ದೂರ ಇರಿ- ಮೊಬೈಲ್ ಬಳಕೆ ಬಗ್ಗೆ ಎಚ್ಚರಿಕೆ- ಕೆ. ಸಿ. ಚನ್ನಕೃಷ್ಣಯ್ಯ

ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದಾಸ್ಯಕ್ಕೆ ಒಳಗಾಗದೇ, ಅವುಗಳಿಂದ ದೂರ ಇರಬೇಕು. ಮೊಬೈಲ್ ಬಳಕೆಯ ಬಗ್ಗೆಯೂ ಎಚ್ಚರಿಕೆಯಿಂದ ಇರುವಂತೆ ಶಂಕರಗೌಡ ಶಿಕ್ಷಣ ಮಹಾವಿದ್ಯಾಲಯದ ನಿಕಟಪೂರ್ವ ಪ್ರಾಂಶುಪಾಲ ಹಾಗೂ ಹಿರಿಯ ಪ್ರಾಧ್ಯಾಪಕರಾದ ಡಾ. ಕೆ.ಸಿ.ಚನ್ನಕೃಷ್ಣಯ್ಯರವರು ಕರೆ ನೀಡಿದರು.

ಮಂಡ್ಯ ನಗರದ ಪಿಇಎಸ್ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶವನ್ನು ಉತ್ತಮ ಪಡಿಸುವ ಸಲುವಾಗಿ ಇಂದು ನಡೆದ ಶಿಕ್ಷಕರ ಶಾಲಾ ವಾಸ್ತವ್ಯ ವಿನೂತನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಏಕೆ ಓದಬೇಕು ಮತ್ತು ಹೇಗೆ ಓದಬೇಕು ಎಂಬುದರ ಬಗ್ಗೆ ಮಕ್ಕಳಿಗೆ ಉದಾಹರಣೆಯ ಮೂಲಕ ಮನವರಿಕೆ ಮಾಡಿಕೊಟ್ಟರು‌.

ಪರೀಕ್ಷೆಗೆ ಇನ್ನೂ 90 ದಿನಗಳು ಉಳಿದಿದ್ದು, ಇಂದಿನಿಂದಲೇ ಶ್ರಮವಹಿಸಿ ಪ್ರತಿದಿನ ಕನಿಷ್ಟ 6 ಗಂಟೆಗಳ ಕಾಲ ಅಭ್ಯಾಸ ಮಾಡಿದರೆ, ಹೆಚ್ಚು ಅಂಕ ಗಳಿಸಿ, ಉತ್ತೀರ್ಣರಾಗಬಹುದು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಮಂಡ್ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಶಿಕ್ಷಕ ಶಿವಣ್ಣಮಂಗಲ ಮಾತನಾಡಿ, ಶಾಲಾ ವಾಸ್ತವ್ಯ ಕಾರ್ಯಕ್ರಮವು ಶಿಕ್ಷಣ ಇಲಾಖೆಯ ವಿನೂತನ ಕಾರ್ಯಕ್ರಮವಾಗಿದ್ದು, ಇದು ಮಕ್ಕಳ ಕಲಿಕೆಗೆ ಪ್ರೇರಣಾತ್ಮಕವಾಗಿದ್ದು, ಶಿಕ್ಷಕರು, ಪೋಷಕರು, ಮಕ್ಕಳು ಮತ್ತು ಸಮುದಾಯದ ಒಟ್ಟು ಸಹಕಾರದಿಂದ ಉತ್ತಮ ಫಲಿತಾಂಶ ಪಡೆಯಬಹುದಾಗಿದೆ ಎಂದು ಸಲಹೆ ನೀಡಿದರು

ವಿದ್ಯಾರ್ಥಿಗಳು ಸಮಯದ ಸದುಪಯೋಗ ಮಾಡಿಕೊಂಡು ಏಕಾಗ್ರತೆಯಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ, ಯಶಸ್ಸು ಸಾಧ್ಯ ಎಂದು ಪ್ರೇರೇಪಣಾ ನುಡಿಗಳನ್ನಾಡಿದರು.

ಮುಖ್ಯಶಿಕ್ಷಕರಾದ ಶ್ರೀಮತಿ ಲತಾರವರು ಸ್ವಾಗತಿಸಿ, ಶಿಕ್ಷಕರಾದ ಟಿ.ಅಶೋಕ್ ರವರು ವಂದಿಸಿದರು. ವೇದಿಕೆಯಲ್ಲಿ ಶಿಕ್ಷಕರಾದ ಮಧುಸೂದನ್, ಮಹೇಶ್, ರವಿಚಂದ್ರ ಉಪಸ್ಥಿತರಿದ್ದರು.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024