ಮಂಡ್ಯದ ಕಾರೆಮನೆ ಗೇಟ್ ಬಳಿಯ ರಸ್ತೆ ಗುಂಡಿ ಗೆ ನಿವೃತ್ತ ಯೋಧ ಬಲಿಯಾಗಿರುವ ಘಟನೆ ಕಳೆದರಾತ್ರಿ ಜರುಗಿದೆ.
ಎಸ್.ಎನ್ ಕುಮಾರ್ (39) ಮೃತ ನಿವೃತ್ತ ಯೋಧ. ತಂದೆ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ ಸಾತನೂರಿನಿಂದ ಮಂಡ್ಯಕ್ಕೆ ಬರುತ್ತಿದ್ದ ವೇಳೆ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಅವಘಡ ಸಂಭವಿಸಿದೆ.ಒಕ್ಕಲಿಗರ ಮತಗಳು ಬಿಜೆಪಿಗೆ: ಆತಂಕ ಹೆಚ್ಚಿಸಿಕೊಂಡಿರುವ ಹೆಚ್ ಡಿ ಕೆ – ಸಿ.ಪಿ.ಯೋಗೇಶ್ವರ್
ಗುಂಡಿಯನ್ನು ತಪ್ಪಿಸಲು ಹೋಗಿ ಎದುರಿನಿಂದ ಬಂದ ಬೈಕ್ಗೆ ಡಿಕ್ಕಿ ಹೊಡೆದ ಕೆಳಗೆ ಬಿದ್ದ ಕುಮಾರ್ ಗೆ ಹಿಂದಿನಿಂದ ಬಂದ ಲಾರಿ ಕುಮರ್ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವವನ್ನಪ್ಪಿದ್ದಾರೆ. ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೇನೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾಗಿದ್ದ ಕುಮಾರ್, ನಿವೃತ್ತಿ ಬಳಿಕ ಪೊಲೀಸ್ ಪೇದೆಯಾಗಿ ತರಬೇತಿಗೆ ಹೋಗುತ್ತಿದ್ದರು. ನಿನ್ನೆ ಸ್ವಗ್ರಾಮ ಸಾತನೂರು ಗ್ರಾಮಕ್ಕೆ ಕುಮಾರ್ ಬಂದಿದ್ದ ವೇಳೆ ಈ ಘಟನೆ ಜರುಗಿದ್ದು, ಮಂಡ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ