ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ತೆಗೆದುಕೊಂಡ ನಂತರ ರಾಜ್ಯದ ಜನರಿಗೆ ಒಳ್ಳೆಯ ಸಂದೇಶ ಹೋಗಿದೆ. ಒಂದು ಮುಕ್ಕಾಲು ವರ್ಷ ರಾಜ್ಯದ ಜನರು ನೆಮ್ಮದಿಯಿಂದ ಇರಬಹುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಇಂದು ಹೇಳಿದರು.
ಶಿರಸಿಯಲ್ಲಿ ಕೆಡಿಸಿಸಿ ಬ್ಯಾಂಕಿನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. ಬೊಮ್ಮಾಯಿಯವರು ತಾಳ್ಮೆಯಿಂದ ಒಳ್ಳೊಳ್ಳೆ ಕಾರ್ಯಕ್ರಮ ಕೊಡುತ್ತಾರೆ ಎಂಬ ಸಂದೇಶ ಜನತೆಗೆ ಹೋಗಿದೆ ಎಂದರು.
ಬೆಲೆ ಹೆಚ್ಚಳ ಸಂಬAಧ ಮುಖ್ಯಮಂತ್ರಿಗಳು 7 ರಂದು ದೆಹಲಿಗೆ ಹೋಗುತ್ತಾರೆ. ಪ್ರಧಾನಿ ಮೋದಿ ಮತ್ತು ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸುವರು ಎಂದು ಸಹಕಾರ ಸಚಿವರು ತಿಳಿಸಿದರು.
ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಜಾರುಮಾಡಿಕೊಂಡಿದ್ದ ಶಿವರಾಂ ಹೆಬ್ಬಾರ್ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿಸಲು ಸಹಕಾರ ಕೋರಿದ್ದರು. ತಾವು, ಭೈರತಿ ಬಸವರಾಜ್ ಸೇರಿ ಎಲ್ಲರೂ ಅವರೊಂದಿಗೆ ಕೈಜೋಡಿಸಿದೆವು ಎಂಬ ಹಳೆಯ ಘಟನೆಯನ್ನು ಸೋಮಶೇಖರ್ ನೆನಪಿಸಿಕೊಂಡರು. ನಾವೆಲ್ಲ ಬೇಡದ ಖಾತೆ ಪಡೆದು ಒಳ್ಳೆಯ ಕೆಲಸ ಮಾಡುತ್ತಿದ್ದೇವೆ ಎಂಬುದನ್ನು ಸಣ್ಣ ಅಪಸ್ವರದ ಧ್ವನಿಯಲ್ಲಿ ಹೊರಹಾಕಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು