ಕುಡಿದ ಮತ್ತಿನಲ್ಲಿ ಮಗ ತನ್ನ ಅಪ್ಪನೊಂದಿಗೆ ಗಲಾಟೆ ಮಾಡುವಾಗ ತಂದೆ ಕೆಳಕ್ಕೆ ಬಿದ್ದು ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲ್ಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ಶುಯವಕ್ರವಾರ ರಾತ್ರಿ ನಡೆದಿದೆ.
ಚಿಕ್ಕಮರಳಿ ಗ್ರಾಮದ ಸಣ್ಣಮರೀಗೌಡ(೬೯) ಮೃತ ವ್ಯಕ್ತಿ. ಇವರ ಪುತ್ರ ಆರೋಪಿ ಮರೀಗೌಡನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮರೀಗೌಡ ಮದ್ಯಪಾನ ವ್ಯಸನಕ್ಕೆ ಒಳಗಾಗಿದ್ದು, ಪದೇ ಪದೇ ಹೆಂಡತಿ ಮಕ್ಕಳೊಂದಿಗೆ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಗಲಾಟೆ ವಿಚಾರವಾಗಿ ಕೆಲ ದಿನಗಳ ಹಿಂದೆ ಗಂಡ ಹೆಂಡತಿಯ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಕರಣ ಇತ್ಯರ್ಥಪಡಿಸಿಕೊಂಡಿದ್ದರು. ಆ ವೇಳೆ ಗಂಡನ ಹೆಸರಿನಲ್ಲಿದ್ದ ಎಲ್ಲಾ ಆಸ್ತಿಯನ್ನು ಹೆಂಡತಿಯ ಹೆಸರಿಗೆ ನೋಂದಣಿ ಮಾಡಿಸಿದ್ದರು.
ಇದೇ ವಿಚಾರವಾಗಿ ಶುಕ್ರವಾರ ರಾತ್ರಿ ಕುಡಿದು ಹೆಂಡತಿ ಮಕ್ಕಳೊಂದಿಗೆ ಗಲಾಟೆ ಮಾಡುವ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ತಂದೆ ಸಣ್ಣಮರೀಗೌಡರನ್ನು ತಳ್ಳಿದ ಪರಿಣಾಮ ಆತನ ತಲೆ ಗೋಡೆಗೆ ಬಡಿದು ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆತಂದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ತೆರಳುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು