ಬೆಂಗಳೂರು
ಇತ್ತೀಚಿಗೆ ವಿಜಯಪುರದಲ್ಲಿ ಜರುಗಿದ 37ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ನಾನು ನೀಡಿರುವ ಕಾರ್ಯನಿರತ ಪತ್ರಕರ್ತರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಕಟಿಬದ್ದನಾಗಿದ್ದು, ನನ್ನ ಈಗಿನ ಅಧಿಕಾರಾವಧಿಯೊಳಗೇ ಈಡೇರಿಸುವದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಪುನರುಚ್ಚರಿಸಿದರು.ಮಂಡ್ಯದಲ್ಲಿ ಬ್ರಹ್ಮಚಾರಿಗಳ ಪಾದಯಾತ್ರೆಗೆ ನಟ ಧನಂಜಯ ಚಾಲನೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)
ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ನೇತೃತ್ವದಲ್ಲಿಂದು ಕಾರ್ಯ ನಿರತ ಪತ್ರಕರ್ತರ ನಿಯೋಗ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವೇಳೆ ಈ ಭರವಸೆ ನೀಡಿದರಲ್ಲದೆ, ಭರವಸೆ ಈಡೇರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಗ್ರಾಮೀಣ ಪತ್ರಕರ್ತರಿಗೆ ಕೂಡಲೇ ಬಸ್ ಪಾಸ್ ಕೊಡಲು ಆದೇಶ ಹೊರಡಿಸುವುದಾಗಿ ತಿಳಿಸಿದರು.
ಕಾರ್ಯನಿರತ ಪತ್ರಕರ್ತರನ್ನು ಯಶಸ್ವಿನಿ ಯೋಜನೆ ವ್ಯಾಪ್ತಿಗೆ ಒಳಪಡಿಸುವುದು, ನಿವೃತ್ತ ಪತ್ರಕರ್ತರಿಗೆ ನೀಡಲಾಗುತ್ತಿರುವ ಮಾಸಾಶನವನ್ನು 10 ಸಾವಿರ ರೂ.ಗಳಿಂದ 20 ಸಾವಿರ ರೂ.ಗಳಿಗೆ ಹೆಚ್ಚಿಸುವದು, ಪತ್ರಕರ್ತರ ಕ್ಷೇಮಾಭಿವೃದ್ದಿಗೆ 100 ಕೋಟಿ ರೂಗಳನ್ನು ಮೀಸಲಿಡುವದು, ಪತ್ರಕರ್ತರ ಭರವಸೆಗಳು, ಕೆಯುಡಬ್ಲೂಜೆ ಅಡಿಯಲ್ಲಿ ನಿರ್ವಹಣೆಯಾಗುವಂತೆ ಪ್ರತ್ಯೇಕ ಆದೇಶ ಹೊರಡಿಸುವ ಕಾರ್ಯನಿರತ ಪತ್ರಕರ್ತರ ಬಹುದಿನಗಳ ಈ ಪ್ರಮುಖ ಬೇಡಿಕೆಗಳನ್ನು ನನ್ನ ಅಧಿಕಾರ ಅವಧಿಯಲ್ಲೇ ಈಡೇರಿಸುವದಾಗಿ ಹೇಳಿದರು.
ಇನ್ನಿತರೆ ಬೇಡಿಕೆಗಳನ್ನು ಆಧ್ಯತೆ ಮೇರೆಗೆ ಪರಿಶೀಲಿಸಿ ಅವುಗಳನ್ನೂ ಸಹ ಈಡೇರಿಸಲು ಕ್ರಮ ಜರುಗಿಸಲಾಗುವುದು ಎಂದರು.
ನವದೆಹಲಿ : ಇಂದು ಸಭೆ ನಡೆಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ( CWMA ) ಮೇ ತಿಂಗಳ ಭಾಗವಾಗಿ ತಮಿಳುನಾಡಿಗೆ… Read More
ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ… Read More
ಮೈಸೂರು: “ಸಮಾಜ ಸೇವೆ ಮಾಡಲು ನಾನು ಐ.ಎ.ಎಸ್. ಮತ್ತು ಕೆ.ಎ.ಎಸ್ ಅಧಿಕಾರಿಯಾಗಬೇಕು ಎನ್ನುತ್ತಾರೆ ಹಲವರು. ಆದರೆ ನನ್ನ ಪ್ರಕಾರ ಸಮಾಜ… Read More
ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More
ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು… Read More
ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More
This website uses cookies.
Leave a Comment