Karnataka

ಚನ್ನಪಟ್ಟಣದ ಗೊಂಬೆಗಳಿಗೂ ಕರಿನೆರಳು ಗೊಂಬೆ ಹೇಳುತೈತೆ ನಾವು ಇಲ್ಲಿ ಅನಾಥರು…..

ಸುಪ್ರೀತಾ ಚಕ್ಕೆರೆ

ನವರಾತ್ರಿ ಬಂತೆಂದರೆ ಸಾಕು ಗೊಂಬೆಗಳನ್ನು ಪಟ್ಟಕ್ಕೆ ಏರಿಸುತ್ತಾರೆ. ಸಂಪ್ರದಾಯಿಕವಾಗಿ ರೂಢಿಕೊಂಡಿರುವ ಈ ಗೊಂಬೆ ಕೂರಿಸುವ ಪದ್ಧತಿ ಕೇವಲ ಕರ್ನಾಟಕ ಮಾತ್ರವಲ್ಲದೇ ದೇಶದ ವಿವಿಧ ಮೂಲೆ ಹಾಗೂ ವಿದೇಶಗಳಲ್ಲಿಯೂ ಆಚರಣೆಯಲ್ಲಿದೆ.

ಸರಳ ದಸರಾ – ಕುಗ್ಗಿದ ಬೇಡಿಕೆ:

ಇದೇ ಕಾರಣಕ್ಕೆ ನವರಾತ್ರಿ ಸಮಯ ದಲ್ಲಿ ಚನ್ನಪಟ್ಟಣದ ಗೊಂಬೆಗಳಿಗೆ ಬೇಡಿಕೆ ಹೆಚ್ಚು. ಹಳೆ ಮೈಸೂರು ಭಾಗದ ಈ ವಿಶಿಷ್ಠ ಗೊಂಬೆ ಕೂರಿಸಲು ಜನರು ತಿಂಗಳು ಮುಂಚೆ ಬುಕಿಂಗ್​ ಕೂಡ ಮಾಡುತ್ತಾರೆ. ಆದರೆ, ಈ ಬಾರಿ ಕೊರೋನಾ ಪರಿಣಾಮ ಗೊಂಬೆಗಳ ಬೇಡಿಕೆ ಕುಗ್ಗಿದೆ. ಅಲ್ಲದೇ ಮೈಸೂರು ದಸರಾ ವೀಕ್ಷಣೆಗೆ ಆಗಮಿಸುವವರು ಪ್ರವಾಸಿಗರನ್ನು ಈ ಗೊಂಬೆಗಳು ಸೆಳೆಯುತ್ತಿದ್ದವು. ಆದರೆ, ಈ ಬಾರಿ ಸರಳ ದಸರಾ ಆಚರಣೆಯಾಗುತ್ತಿದೆ. ದುಪ್ಪಟ್ಟು ಮಾರಾಟವಾಗುತ್ತಿದ್ದ ಗೊಂಬೆಗಳನ್ನು ಖರೀದಿ ಮಾಡುವವರೇ ಇಲ್ಲ. ಹೀಗಾಗಿ ಕುಶಲಕರ್ಮಿಗಳು, ಮಾರಾಟಗಾರರು ಸೊರಗಿದ್ದಾರೆ.  ಮಾರಾಟವಾಗದೇ ಮೂಲೆ ಸೇರಿರುವ ಬೊಂಬೆ ಹೇಳುತೈತೆ. ನಾವು ಅನಾಥರಾಗಿದ್ದೇವೆ

ದಸರಾ ಸಂಭ್ರಮ ಶುರುವಾಗುವ ಮೊದಲೇ ಇಲ್ಲಿನ ಕುಶಲಕರ್ಮಿಗಳಿಗೆ ಬಿಡುವಿಲ್ಲದ ಕೆಲಸ ಆರಂಭವಾಗುತ್ತಿತ್ತು. ಆದರೆ, ಕೊರೋನಾ ಏಟಿಗೆ ಗೊಂಬೆನಾಡಿನ ಕುಶಲಕರ್ಮಿಗಳು, ತಯಾರಕರು, ಮಾರಾಟಗಾರರು ಬೊಂಬೆ ಮಾರಾಟವಾಗದೇ ಮರುಗುತ್ತಿದ್ದಾರೆ.

ಧೂಳು ತಿನ್ನುತ್ತಿರುವ ಗೊಂಬೆಗಳು:

ವಿಶ್ವದ ಮೂಲೆ ಮೂಲೆಗೂ ರಫ್ತಾಗುತ್ತಿದ್ದ ಚನ್ನಪಟ್ಟಣದ ಗೊಂಬೆಗಳು ಈಗ ಗೊಂಬೆ ಮಳಿಗೆಗಳಲ್ಲಿಯೇ ಧೂಳು ಹಿಡಿಯುತ್ತಿವೆ. ಕಳೆದ 6 ತಿಂಗಳಿನಿಂದ ಅವರೆಲ್ಲರ ಬದುಕು ಬೀದಿಗೆ ಬಿದ್ದಿದೆ.

ದಸರಾ ಆರಂಭಕ್ಕೆ ಎರಡು ತಿಂಗಳು ಇದ್ದಂತೆ ಇಲ್ಲಿನ ಗೊಂಬೆಗಳಿಗೆ ಸಾಕಷ್ಟು ಬೇಡಿಕೆ ಇರುತ್ತಿತ್ತು, ಆದರೆ ಈ ಬಾರಿಯ ಸರಳ ದಸರಾದಿಂದಾಗಿ ಇಲ್ಲಿನ ಮಾರಟಗಾರರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಧೂಳು ಇಡಿದಿದ್ದ ಎಲ್ಲಾ ಗೊಂಬೆಗಳನ್ನ ಇಟ್ಟುಕೊಂಡೇ ಮಾರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.

ಬೇಡಿಕೆ ಕುಸಿತ , ಕಡಿಮೆ ಬೆಲೆ :

ಇಲ್ಲಿನ ರಾಮನಗರ – ಚನ್ನಪಟ್ಟಣ ಮಧ್ಯೆ ಇರುವ ಗೊಂಬೆ ಮಳಿಗೆಗಳಿಗೆ ಪ್ರವಾಸಿಗರು ಖರೀದಿಗೆ ಮುಗಿಬೀಳುತ್ತಿದ್ದರು. ಆದರೆ ಈ ರೀತಿಯ ಸನ್ನಿವೇಶಗಳು ಕಂಡುಬರುತ್ತಿಲ್ಲ.ಇಲ್ಲಿನ ಕುಶಲಕರ್ಮಿಗಳು ಇದೀಗ ದಸರಾ ಗೊಂಬೆಗಳಿಗೆ ಬೇಡಿಕೆ ಇಲ್ಲದೇ ಕಂಗಲಾಗಿ ಹೋಗಿದ್ದಾರೆ. ಇನ್ನು ಪ್ರವಾಸಿಗರಿಲ್ಲದೇ ಶೋ ರೂಮ್‌ಗಳಲ್ಲಿ ವ್ಯಾಪಾರವೂ ಇಲ್ಲದಂತೆ ಆಗಿದೆ. ಜೊತೆಗೆ ತಯಾರಾದ ಗೊಂಬೆಗಳನ್ನು ಅತೀ ಕಡಿಮೆ ಬೆಲೆಗೆ ವ್ಯಾಪಾರವಾಗುತ್ತಿರುವುದು ಕೂಡ ಮತ್ತೊಂದುಸಂಕಟ ತಂದಿದೆ.

ಜೀವನದ ಮೇಲೆ ಬರೆ:

ವಿಶ್ವದಲ್ಲಿಯೇ ಹೆಸರುವಾಸಿಯಾಗಿರುವ ಇಲ್ಲಿನ ಬೊಂಬೆಗಳು ಈಗ ಬೇಡಿಕೆ ಕಳೆದುಕೊಂಡಿವೆ. ಕೊರೋನಾ ಸಂಕಷ್ಟದಲ್ಲಿ ನಲುಗಿರುವ ಇಲ್ಲಿನ ಕುಶಲಕರ್ಮಿಗಳಿಗೆ ಇದೀಗ ಗೊಂಬೆ ಮಾರಾಟವಾಗದಿರುವುದು ಅವರ ಜೀವನದ ಮೇಲೆ ಮತ್ತಷ್ಟು ಬರೆ ಎಳೆದಿದೆ. ಸದ್ಯ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ತಮ್ಮ ಸಹಾಯಕ್ಕೆ ಸರ್ಕಾರವೇ ಸೂಕ್ತ ಕ್ರಮವಹಿಸಬೇಕು ಎಂದು ಇಲ್ಲಿನ ಕುಶಲಕರ್ಮಿ, ವ್ಯಾಪಾರಿಗಳ ಕೂಗಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024