ಹಿಂದೂ ದೇವಾಲಯದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ವಿಶೇಷ ಪ್ರಾರ್ಥನೆ ಮಾಡಿದ ಅಪರೂಪದ ಘಟನೆ ಮಡಿಕೇರಿಯಲ್ಲಿ ಜರುಗಿದೆ
ರಾಜ್ಯದಲ್ಲಿ ಹಿಜಬ್ ವಿವಾದದ ಬಳಿಕ ಹಿಂದೂ ದೇವಾಲಯಗಳ ಬಳಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿತ್ತು.
ಆ ನಂತರ ಹಲಾಲ್ ಕಟ್ – ಜಟ್ಕಾ ಕಟ್ ಮಾಂಸ ಮಾರಾಟದ ಸಂಘರ್ಷ ಜೋರಾಗಿದೆ.
ಈ ನಡುವೆ ಹಾವೇರಿ ಮೂಲದ ರಜಿಯಾ ಮಡಿಕೇರಿ ನಗರದ ಮುನೇಶ್ವರ ದೇವಾಲಯದ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಅಗಮಿಸಿ ಹಿಂದೂ – ಮುಸ್ಲಿಂ ಸಮುದಾಯದವರು ಸಹೋದರರಂತೆ ಬದುಕು ನಡೆಸಬೇಕು ಎಂಬ ನಿಟ್ಟಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ರಜಿಯಾ, ಎಲ್ಲರ ಮೈಯಲ್ಲಿ ಹರಿಯುವುದು ಕೆಂಪು ರಕ್ತವೇ ಹೊರತು ಬೇರೆ ಅಲ್ಲ. ದೇಶದಲ್ಲಿ ಅನೇಕ ಧರ್ಮ, ಸಂಪ್ರದಾಯ, ಸಮುದಾಯ, ಭಾಷೆಗಳು ಇವೆ. ವಿವಿಧತೆಯಲ್ಲಿ ಏಕತೆ ಇರುವುದು ನಮ್ಮ ದೇಶದ ವಿಶೇಷ. ಕೆಲ ಭಿನ್ನತೆಗಳಿದ್ದರೂ ಎಲ್ಲರೂ ಕೂಡಿಕೊಂಡು ಒಟ್ಟಾಗಿ ಹೋಗುವುದು ಇಂದಿನ ದಿನಗಳಲ್ಲಿ ಅವಶ್ಯಕತೆಯಾಗಿದೆ ಎಂದು ಅಭಿಪ್ರಾಯಪಟ್ಟರು.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ