Trending

ಮಕ್ಕಳು ವಿದ್ಯೆಯ ಜೊತೆ ಕ್ರೀಡಾ, ಸಾಂಸ್ಕೃತಿಕ ಕಾರ್ಯಕ್ರಮ ಮುಖ್ಯ

11ನೇ ಮಕ್ಕಳ ರಾಷ್ಟ್ರೀಯ ಸಾಂಸ್ಕøತಿಕ ಸಮ್ಮೇಳನದ ಸಮ್ಮೇಳನಾಧ್ಯಕ್ಷೀಯ ಅನನ್ಯ ಅಭಿಮತ

ಸಾಂಸ್ಕೃತಿಕ ಕಾರ್ಯಕ್ರಮಗಳು ನಮ್ಮ ನಾಡಿನ ಕಲೆ, ಸಾಹಿತ್ಯ, ಸಂಸ್ಕತಿಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮವಾಗಿವೆ ಎಂದು ಸಮ್ಮೇಳನಾಧ್ಯಕ್ಷೆ ಕು. ಎಂ.ಎಸ್. ಅನನ್ಯ ಕಂಠಿ ತಿಳಿಸಿದರು.

ಮಂಡ್ಯ ದ ಗಾಂಧಿ ಭವನದಲ್ಲಿ ರಾಷ್ಟ್ರೀಯ ಮಕ್ಕಳ ಪ್ರತಿಭಾ ಕೇಂದ್ರ,
ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ, ಕನ್ನಡ ಸಂಸ್ಕೃತಿ ಇಲಾಖೆ
ವತಿಯಿಂದ ನಡೆದ 11ನೇ ಮಕ್ಕಳ ರಾಷ್ಟ್ರೀಯ ಸಾಂಸ್ಕøತಿಕ
ಸಮ್ಮೇಳನದ ಸಮ್ಮೇಳನಾಧ್ಯಕ್ಷೀಯ ಮಾತನಾಡಿದ ಕು. ಅನನ್ಯ
ಸಾಂಸ್ಕೃತಿಕ ಕಾರ್ಯಕ್ರಮಗಳು ರಾಜ ಮಹಾರಾಜರ ಕಾಲದಿಂದಲೂ
ನಡೆದುಕೊಂಡು ಬಂದಿವೆ. ಇವು ನಿನ್ನೆ ಮೊನ್ನೆಯದ್ದಲ್ಲ. ಕೇವಲ ನೃತ್ಯ, ಜನಪದ ಗೀತೆಗಳಷ್ಟೇ ಅಲ್ಲದೆ, ಪೂಜಾ ಕುಣಿತ, ವೀರಗಾಸೆ, ಬೀಸೋ ಕಲ್ಲಿನ ಪದಗಳು, ಲಾವಣಿಗಳು ಎಲ್ಲವೂ ನಮ್ಮ ಸಾಂಸ್ಕೃತಿಕ ಕಲೆಯನ್ನು ಪ್ರತಿಬಿಂಬಿಸುತ್ತವೆ ಎಂದರು.

ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ ಸಮ್ಮೇಳನ ಎಲ್ಲರಿಗೂ
ಸಂಭ್ರವಾಗಿದೆ. ಡಾ. ಅಂಬರೀಶ್ ಅವರ ಹೆಸರಿನಲ್ಲಿ ವೇದಿಕೆಯ ಹೆಸರು
ಇಟ್ಟು ಕೊಂಡು ನನ್ನನ್ನು ಸಮ್ಮೇಳನಾಧ್ಯಕ್ಷೆಯನ್ನಾಗಿ ಆಯ್ಕೆ ಮಾಡಿ, ಇಂತಹ ಉನ್ನತ ಹುದ್ದೆಯನ್ನು ಅಲಂಕರಿಸಲು ಅವಕಾಶ ಮಾಡಿಕೊಟ್ಟ
ರಾಷ್ಟ್ರೀಯ ಮಕ್ಕಳ ಪ್ರತಿಭಾ ಕೇಂದ್ರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ‌ ಎಂದರು.

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆರೋಗ್ಯ ಮುಖ್ಯ.
ಆರೋಗ್ಯವಂತರಾಗಿ ಇರಬೇಕಾದರೆ ಮಕ್ಕಳು ವಿದ್ಯೆಯ ಜೊತೆಗೆ
ಕ್ರೀಡಾ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ
ತೊಡಗಿಸಿಕೊಳ್ಳಬೇಕು. ಪ್ರತಿ ಮಕ್ಕಳೂ ಇಂತಹ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ
ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಹೇಳಿದರು.

ಕಾರ್ಯಕ್ರಮ ದಲ್ಲಿ ಧರ್ಮದರ್ಶಿ ವಿ.ಎಸ್. ಕೃಷ್ಣ, ರಾ.ಮ.ಪ್ರ.ಕೇಂದ್ರದ ರಾಷ್ಟ್ರಾಧ್ಯಕ್ಷೆ ಡಾ. ಸ್ವಾತಿ ಪಿ. ಭಾರದ್ವಾಜ್, ಜಿ.ಪಂ. ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ನಗರಸಭಾ ಮಾಜಿ
ಸದಸ್ಯ ಕೆ.ಎನ್. ದೀಪಕ್, ಹಿರಿಯ ವಕೀಲ ಮುದ್ದುರಾಜು, ಸಾಹಿತಿಯ ಎಚ್.ಸಿ.
ಚಿಕ್ಕಾಚಾರ್ಯ ಇತರರು ಇದ್ದರು.
ಇದೇ ವೇಳೆ ಮಕ್ಕಳು ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿದರು.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024