ಐಪಿಎಲ್ 20-20ಯ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ, ಸನ್ ರೈಸರ್ಸ್ ಆಫ್ ಹೈದರಾಬಾದ್ ತಂಡ ರೋಚಕ ಗೆಲುವನ್ನು ಸಾಧಿಸಿತು.
ದುಬೈನ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಎಸ್ಆರ್ಹೆಚ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಆರ್ಸಿಬಿ ತಂಡದಿಂದ ಆರಂಭಿಕ ಆಟಗಾರರಾಗಿ ಫೀಲ್ಡಿಗಿಳಿದ ಜೆ. ಫಿಲಿಪ್ ಹಾಗೂ ದೇವದತ್ ಪಡಿಕ್ಕಲ್ ಅವರ ಆಟ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತು. ಫಿಲಿಪ್ 31 ಎಸೆತಗಳಿಗೆ 32 ರನ್ ಗಳಿಸಿದರೆ, ಪಡಿಕ್ಕಲ್ 8 ಎಸೆತಗಳಿಗೆ 5 ರನ್ಗಳ ಮೊತ್ತವನ್ನು ತಂಡಕ್ಕೆ ನೀಡಿದರು. ಆದರೆ ನಿರೀಕ್ಷಿತ ಆಟಗಾರರಾದ ವಿರಾಟ್ ಕೊಹ್ಲಿ ಅವರ ಆಟ ಆಕರ್ಷಕವಾಗಿರಲಿಲ್ಲ. ಕೊಹ್ಲಿ 14 ಎಸೆತಗಳಿಗೆ ಕೇವಲ 9 ರನ್ ಗಳಿಸಿದರು. ನಂತರ ಬಂದ ಎಬಿ ಡೀ ವಿಲಿಯರ್ಸ್ 24 ಎಸೆತಗಳಿಗೆ 24 ರನ್ ಗಳಿಸಿದರು. ಆರ್ಸಿಬಿ ತಂಡ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 120 ರನ್ಗಳನ್ನು ಮಾತ್ರ ಗಳಿಕೆ ಮಾಡಿತು.
ಆರ್ಸಿಬಿ ನೀಡಿದ ಸರಳ ಗುರಿಯನ್ನು ಎಸ್ಆರ್ಹೆಚ್ ತಂಡ ಸುಲಭವಾಗಿ ಸಾಧಿಸಿತು. ಎಸ್ಆರ್ಹೆಚ್ ನೀಡಿದ ಗುರಿಯನ್ನು ಸುಲಭವಾಗಿ ಪೂರೈಸಿತು. ಎಸ್ಆರ್ಹೆಚ್ ತಂಡದಿಂದ ಡಿ. ವಾರ್ನರ್ ಹಾಗೂ ವೃದ್ಧಿಮಾನ್ ಸಹಾ ಮೈದಾನಕ್ಕಿಳಿದು ಆಟಕ್ಕೆ ಸಾಧಾರಣ ಆರಂಭ ನೀಡಿದರು. ವಾರ್ನರ್ 5 ಎಸೆತಗಳಿಗೆ 8 ರನ್ ಗಳಿಸಿದರೆ, ಸಹಾ 32 ಎಸೆತಗಳಿಗೆ 39 ರನ್ ಗಳಿಸಿದರು. ನಂತರ ಬಂದ ಮನೀಶ್ ಪಾಂಡೆ ಮತ್ತು ಜೆ.ಹೋಲ್ಡರ್ ಅವರು ಕ್ರಮವಾಗಿ 19 ಎಸೆತಗಳಿಗೆ 26 ರನ್ ಹಾಗೂ 10 ಎಸೆತಗಳಿಗೆ 26 ರನ್ ಗಳಿಸಿದರು. ಎಸ್ಆರ್ಹೆಚ್ ತಂಡ 14.1 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿ ಪಂದ್ಯದಲ್ಲಿ ಗೆಲುವಿನ ಗರಿಯನ್ನು ತನ್ನದಾಗಿಸಿಕೊಂಡಿತು.
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
This website uses cookies.
Leave a Comment