February 23, 2026

Newsnap Kannada

The World at your finger tips!

Pakistan

ಇಮ್ರಾನ್‌ ಖಾನ್‌ ಶ್ರೀಲಂಕಾ ಸಂಸತ್‌ ಭಾಷಣ ರದ್ದು : ಭಾರತದ ಸಂಬಂಧ ಗಟ್ಟಿ ಮಾಡಿಕೊಂಡ ಶ್ರೀ ಲಂಕಾ

Spread the love

ಪಾಕಿಸ್ತಾನದ ಪ್ರಧಾನಿ‌ ಇಮ್ರಾನ್‌ ಖಾನ್ ಗೆ ಶ್ರೀಲಂಕಾದ ಸಂಸತ್ತಿನಲ್ಲಿ ಭಾಷಣವನ್ನು ಅವಕಾಶವನ್ನು ರದ್ದುಗೊಳಿಸಲಾಗಿದೆ.

ಇಮ್ರಾನ್‌ ಖಾನ್‌ಗೆ ಭಾಷಣಕ್ಕೆ ಅನುಮತಿ ನೀಡಿದರೆ ಭಾರತದ ಜೊತೆಗಿನ ಉತ್ತಮ ಸಂಬಂಧ ಹಾಳಾಗಬಹುದು ಎಂಬ ಕಾರಣಕ್ಕೆ ಶ್ರೀಲಂಕಾ ಸರ್ಕಾರ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ ಎನ್ನಲಾಗಿದೆ.

ಈಗಾಗಲೇ ಶ್ರೀಲಂಕಾ ಚೀನಾದ ಸಾಲದ ಸುಳಿಯಲ್ಲಿ ಸಿಲುಕಿದೆ. ಈ ನಡುವೆ ಭಾರತ ಶ್ರೀಲಂಕಾಗೆ 5 ಲಕ್ಷ ಕೋವಿಡ್‌ ಲಸಿಕೆಯನ್ನು ಉಚಿತವಾಗಿ ನೀಡಿದೆ.
ಈ ವೇಳೆ ಯಲ್ಲಿ ಇಮ್ರಾನ್‌ ಈಗಾಗಲೇ ವಿಶ್ವದ ವೇದಿಕೆಯಲ್ಲಿ ಭಾರತ ವಿರುದ್ಧ ಸುಳ್ಳು ಆರೋಪ ಮಾಡುತ್ತಾ ಬಂದಿದ್ದಾರೆ. ಈ ನಡುವೆ ಶ್ರೀಲಂಕಾದಲ್ಲಿ ಭಾಷಣಕ್ಕೆ ಅನುಮತಿ ನೀಡಿದರೆ ಇಲ್ಲೂ ಭಾರತದ ವಿರುದ್ದ ಆರೋಪ ಮಾಡಿದರೆ ಭಾರತದ ಜೊತೆಗಿನ ಸಂಬಂಧ ಹಾಳಾಗಬಹುದು ಎಂಬ ಮಾತು ಕೇಳಿ ಬಂದಿತ್ತು.

ಈ ಕಾರಣದ ಜೊತೆಗೆ ಶ್ರೀಲಂಕಾದಲ್ಲಿ ಬೌದ್ಧರು ಮತ್ತು ಮುಸ್ಲಿಮರ ನಡುವೆ ಈಗ ಘರ್ಷಣೆಗಳು ನಡೆಯುತ್ತಿದೆ. ಭಾಷಣಕ್ಕೆ ಅವಕಾಶ ನೀಡಿದರೆ ಬೌದ್ಧ ಧರ್ಮದವರು ಸರ್ಕಾರದ ವಿರುದ್ಧ ತಿರುಗಿ ಬೀಳಬಹುದು ಎಂಬ ಕಾರಣಕ್ಕಾಗಿ ಇಮ್ರಾನ್ ಭಾಷಣ ರದ್ದು ಮಾಡಲಾಗಿದೆ ಎಂದು ಗೊತ್ತಾಗಿದೆ.

error: Content is protected !!