ಭವಿಷ್ಯದಲ್ಲಿ ಎದುರಾಗುವ ಯಾವುದೇ ಚುನಾವಣೆಯಲ್ಲಿ ತಾವು ಸ್ಪರ್ಧಿಸಿಸುವುದಿಲ್ಲ ಎಂದು ಹಿರಿಯ ರಾಜಕಾರಣಿ, ಹಾಲಿ ಸಂಸದ ಶ್ರೀನಿವಾಸ ಪ್ರಸಾದ್ ಅವರು ಘೋಷಿಸುವ ಮೂಲಕ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಪ್ರಕಟಿಸಿದ್ದಾರೆ.
ತಮ್ಮ ೭೫ನೇ ವರ್ಷದ ಹುಟ್ಟುಹಬ್ಬದಂದೇ ಮೈಸೂರಿನಲ್ಲಿ ಇಂದು ಈ ತೀರ್ಮಾನ ಪ್ರಕಟಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ನಿಲುವಿಗೆ ಈ ಮೂಲಕ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.
ಇದುವರೆಗೆ ನಾನು ೧೪ ಚುನಾವಣೆ ಎದುರಿಸಿದ್ದೇನೆ. ಈ ಹಿಂದಿನ ತಮ್ಮ ೧೨ನೇಚುನಾವಣೆಯೇ ಸಾಕು ಎನಿಸಿತ್ತು. ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿಯಲ್ಲಿ ಕಂದಾಯ ಸಚಿವನಾಗಿ ಅವಧಿ ಪೂರ್ಣಗೊಳಿಸಲು ಎರಡು ವರ್ಷ ಅವಕಾಶ ನೀಡಿದ್ದರೆ ಸಾಕಾಗಿತ್ತು. ಹಾಗೆಯೇ ಅದೇ ನನ್ನ ಕಡೆಯ ಚುನಾವಣೆಯೂ ಆಗುತ್ತಿತ್ತು. ಆದರೆ ಬದಲಾದ ರಾಜಕೀಯ ವಾತಾವರಣದಿಂದಾಗಿ ತಮ್ಮ ನಿರ್ಧಾರ ಬದಲಿಸಿ ಇನ್ನೆರಡು ಚುನಾವಣೆ ಎದುರಿಸುವಂತಾಯಿತು ಎಂದು ವಿಶ್ಲೇಷಿಸಿದ್ದಾರೆ.
ಆರು ಬಾರಿ ಸಂಸದರಾಗಿರುವ ಪ್ರಸಾದ್ ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿ ಸಚಿವರಾಗಿದ್ದರು. ಬಿ.ಎಸ್. ಯಡಿಯೂರಪ್ಪ ಅವರು ಎರಡು ವರ್ಷಗಳ ಹಿಂದೆ ಮುಖ್ಯಮಂತ್ರಿಯಾಗುವ ಸಮಯದಲ್ಲೇ ಪ್ರಸಾದ ಮೈಸೂರು ನಿವಾಸ ಒಂದು ರೀತಿಯ ರಾಜಕೀಯ ಶಕ್ತಿ ಕೇಂದ್ರವಾಗಿಯೂ ಪರಿವರ್ತಿತವಾಗಿತು.
ಇತ್ತೀಚಿನ ಹಲವು ಸಂದರ್ಭದಲ್ಲಿ ಮಾಜಿ ಸಚಿವ ಎಚ್. ವಿಶ್ವನಾಥ್ ಸೇರಿದಂತೆ ಹಲವು ರಾಜಕೀಯ ನಾಯಕರು ಇಲ್ಲಿಗೆ ಭೇಟಿ ನೀಡಿ ರಾಜಕೀಯ ಮಾತುಕತೆ ನಡೆಸಿರುವುದು ಈಗ ಇತಿಹಾಸ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment