Main News

ಶ್ರೀರಂಗಪಟ್ಟಣ ದಸರಾ ಈ ಬಾರಿ ಸರಳ, ಸಂಪ್ರದಾಯ ಅಷ್ಟೆ

ವಿಜಯನಗರ ಸಾಮ್ರಾಜ್ಯದಿಂದ ನೇರವಾಗಿ ಶ್ರೀರಂಗಪಟ್ಟಣಕ್ಕೆ ಶಿಪ್ಟ್ ಆದ ದಸರಾ ಮಹೋತ್ಸವವನ್ನು ಈ ಬಾರಿ ಶ್ರೀರಂಗಪಟ್ಟಣ ಅದ್ದೂರಿಯಾಗಿ ಆಚರಿಸದೇ ಸರಳ, ಸಂಪ್ರದಾಯಕ ರೀತಿಯಲ್ಲಿ ನಡೆಸಲು
ರಾಜ್ಯ ಸರ್ಕಾರ ನಿರ್ಧರಿಸಿದೆ.
ದುಡ್ಡು , ಕಾಸು ಖರ್ಚಿಲ್ಲದೆ ಸಂಪ್ರದಾಯಕ ದಸರಾ ಆಚರಣೆ ಮಾಡಲು ಯಾವುದೇ ಅಡೆತಡೆ ಇಲ್ಲ. ನಿರಾಂತಕವಾಗಿ ಮಾಡುವಂತೆ ಸರ್ಕಾರವೇ ಸೂಚ್ಯವಾಗಿ ಸೂಚಿಸಿದೆ ಅಂತೆ. ಈ ಸಂಬಂಧ ಜಿಲ್ಲಾ ಮಂತ್ರಿ ನಾರಾಯಣಗೌಡ ಹಾಗೂ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ಸಭೆ ಕರೆದು, ಸಂಪ್ರದಾಯಕವಾಗಿ ಯಾವ ರೀತಿ ಮಾಡಬೇಕು ಎನ್ನುವುದರ ಬಗ್ಗೆ ಸಧ್ಯದಲ್ಲೇ ನಿರ್ಧರಿಸಲಾಗುವುದು ಎಂದು ಮೂಲಗಳು ಹೇಳಿವೆ.
ಶ್ರೀರಂಗಪಟ್ಟಣ ದಸರಾ ವೇಳೆಯಲ್ಲಿ ಯಾವುದೇ ಮೆರವಣಿಗೆ ಇಲ್ಲ. ಸಾಂಸ್ಕೃತಿಕ ಕಾರ್ಯಕ್ರಮಗಳು ಇಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಸಂಪ್ರದಾಯ ಬಿಡದಂತೆ ದಸರಾ ಆಚರಿಸಿರಿ.


ಏಕೆಂದರೆ ಮೈಸೂರಿನ ದಸರಾ ಕೂಡ ಈ ಬಾರಿ ಹೆಚ್ಚು ಆಡಂಬರವಿಲ್ಲದೇ ಸರಳವಾಗಿ ಮಾಡಲಾಗುತ್ತಿದೆ. ಅದರಂತೆ ಶ್ರೀರಂಗಪಟ್ಟಣದಲ್ಲೂ ಕೂಡ ಸರಳವಾಗಿ ಆಚರಿಸಲು ಸೂಚಿಸಿದ್ದಾರೆಂದು ಹೇಳಲಾಗಿದೆ. ಹೀಗಾಗಿ ಸರ್ಕಾರ ಶ್ರೀರಂಗಪಟ್ಟಣ ದಸರಾಗೆ ಇದುವರೆಗೂ ನಯಾ ಪೈಸೆ ಕೊಡುವ ಮಾತಾಡಿಲ್ಲ.

ಜಿಲ್ಲಾ ಮಂತ್ರಿ ಕೂಡ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಶಾಸಕರು ಇರುವ ಹಿನ್ನೆಲೆಯಲ್ಲಿ ಯಾವುದೇ ಅನುದಾನ ಕೊಡಿಸುವ ಮನಸ್ಸು ಮಾಡುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿವೆ.

ಶಾಸಕ ರವೀಂದ್ರ ಶ್ರೀಕಂಠಯ್ಯ ಅಸಮಾಧಾನ

ಶಾಸಕ ರವೀಂದ್ರ ಶ್ರೀಕಂಠಯ್ಯ

ರಾಜ್ಯ ಬಿಜೆಪಿ ಸರ್ಕಾರ ಶ್ರೀರಂಗಪಟ್ಟಣದ ದಸರಾ ವೈಭವವನ್ನು ಮೊಟಕು ಮಾಡಿ, ಸರಳ ಆಚರಣೆಗೆ ಮುಂದಾಗಿದೆ. ಕೋವಿಡ್ ನೆಪ ಇಟ್ಟುಕೊಂಡು ಜೆಡಿಎಸ್ ಶಾಸಕರಿರುವಕ್ಷೇತ್ರದಲ್ಲಿ ದಸರಾ ಸಂಪ್ರದಾಯ ಹಾಗೂ ವೈಭವವನ್ನು ಮುರಿಯುವ ಪ್ರಯತ್ನ ನಡೆದಿದೆ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ
ಅಸಮಾಧಾನಗೊಂಡಿದ್ದಾರೆ.
ಈ ಬಾರಿ ದಸರಾ ವೈಭವವನ್ನು ಅದ್ದೂರಿಯಾಗಿ ಮಾಡುವಂತೆ ನಾವು ಕೂಡ ಒತ್ತಾಯ ಮಾಡುವುದಿಲ್ಲ. ಆದರೆ ಈ ದಸರೆಯ ಹೆಸರಿನಲ್ಲಿ ಶ್ರೀರಂಗಪಟ್ಟಣದಲ್ಲಿ ಕೆಲವು ಅಭಿವೃದ್ಧಿ ಕೆಲಸಮಾಡಲು ಅವಕಾಶ ಆಗುತ್ತಿತ್ತು. ಅದಕ್ಕೂ ಅವಕಾಶವಿಲ್ಲ.ಮೈಸೂರು ದಸರಾಗೆ ನೀಡುವ ಅನುದಾನದಲ್ಲಿ ಶೇ. 25 ರಷ್ಟು ನೀಡುವಂತೆ ನಾನು ಮೂಡಾ ಸಭೆಯಲ್ಲಿ ಒತ್ತಾಯಮಾಡಿರುವುದು ಕೇವಲ ಅರಣ್ಯರೋಧನವಾಯಿತು.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀರಂಗಪಟ್ಟಣದ ದಸರಾಗೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿ ಅಭಿವೃದ್ಧಿಗೆ ಒಂದು ಅನುದಾನ ಕೊಡಿಸಬಹುದು. ಈ ಸಂಬಂಧ ಸಭೆ ಕರೆದರೆ ನನ್ನ ಅಹವಾಲನ್ನು ಮಂಡಿಸುತ್ತೇನೆ ಎಂದು ರವೀಂದ್ರ ಹೇಳಿದರು.

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024