Karnataka

ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ- ಹೈಕೋರ್ಟ್ ಅಂಗಳಕ್ಕೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಹೈಕೋರ್ಟ್ ಅಂಗಳದಲ್ಲಿದೆ ಮಂದಿರವೋ ಅಥವಾ ಮಸೀದಿಯೋ ಇತ್ಯರ್ಥಕ್ಕೆ ಕೊನೆಯ ಸಿದ್ಧತೆಗಳು ನಡೆದಿದೆ.

ಇನ್ನೆರಡು ದಿನಗಳಲ್ಲಿ ಹೈಕೋರ್ಟ್ ನಲ್ಲಿ 108 ಹನುಮ ಭಕ್ತರು ದಾವೆ ಹೂಡಲಿದ್ದಾರೆ.5 ತಿಂಗಳ ಹಿಂದೆ ಶ್ರೀರಂಗಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿ ಜಾಮಿಯಾ ಮಸೀದಿಯಲ್ಲ ಹನುಮ ಮಂದಿರ ಎಂದು ಹೋರಾಟ ನಡೆಸಿತ್ತು.ಜೆಡಿಎಸ್ ಪಂಚರತ್ನಕ್ಕೆ ವರುಣ ಅಡ್ಡಿ : ಒಂದು ವಾರ ಬ್ರೇಕ್- ಮಳೆ ಬಿಡುವು ನೀಡಿದ ಮೇಲೆ ಯಾತ್ರೆಗೆ ಚಾಲನೆ

ಮಸೀದಿ ಜಾಗ ಹಿಂದೂಗಳಿಗೆ ಮರಳಿ ನೀಡುವಂತೆ ಸರ್ಕಾರಕ್ಕೆ ಗಡುವು ನೀಡಿದ್ದವು. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಇದೀಗ ಕೋರ್ಟ್ ಮೊರೆ ಹೋಗಲಾಗಿದೆ. ಅಯೋಧ್ಯೆ ಶ್ರೀರಾಮ ಮಂದಿರ ರೀತಿ ಹನುಮ ಮಂದಿರಕ್ಕಾಗಿ ನ್ಯಾಯಾಂಗ ಹೋರಾಟ ನಡೆಸಲು ಕೊನೆಯ ಹಂತದ ತಯಾರಿಗಳು ಸಹ ಇದೀಗ ಮುಕ್ತಾಯಗೊಂಡಿವೆ.

ವಕೀಲ ರವಿಶಂಕರ್ ಮೂಲಕ ದಾವೆ ಹೂಡಲು ಅಂತಿಮ ಹಂತದ ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ ದಾಖಲಾತಿಗಳನ್ನು ಭಜರಂಗ ಸೇನೆ ಸಿದ್ಧಪಡಿಸಿಕೊಂಡಿದೆ. ದಾಖಲೆ ಸಮೇತ ಕೋರ್ಟ್ ಮೆಟ್ಟಿಲೇರಲು ಭಜರಂಗಸೇನೆ ರಾಜ್ಯಾಧ್ಯಕ್ಷ ಮಂಜುನಾಥ್ ಸಿದ್ಧತೆ ಮಾಡಿಕೊಂಡಿದ್ದಾರೆ. ಹಿಂದೂಗಳ ಮಂಗಳಕರ ಸಂಖ್ಯೆ ಎಂಬ ಕಾರಣಕ್ಕೆ 108 ಪಿಐಎಲ್ ಸಲ್ಲಿಕೆ ಮಾಡಲಾಗುತ್ತಿದೆ. ಇದರಲ್ಲಿ ಹನುಮಂತನನ್ನೇ ಪ್ರತಿವಾದಿ ಮಾಡಿ ಮಂದಿರಕ್ಕಾಗಿ ಹೋರಾಟ ಮಾಡಲು ಮುಂದಾಗಿದ್ದಾರೆ.

ಮೈಸೂರು ಗೆಜೆಟಿಯರ್, ಮಸೀದಿಯಲ್ಲಿನ ಹಿಂದೂ ವಾಸ್ತುಶಿಲ್ಪ, ಮೂರ್ತಿ ಕೆತ್ತನೆ, ಕಂಬಗಳ ಮೇಲಿನ ದೇವರ ಚಿತ್ರಕಲೆ, ಕಲ್ಯಾಣಿ ಸೇರಿದಂತೆ ಕೆಲ ಬ್ರಿಟಿಷ್ ಅಧಿಕಾರಿಗಳು ಉಲ್ಲೇಖಿಸಿರುವ ದಾಖಲೆಗಳ ಸಂಗ್ರಹ ಮಾಡಲಾಗಿದೆ. ಎರಡನ್ಮೂರು ದಿನಗಳಲ್ಲಿ ದಾಖಲೆ ಹಾಗೂ ಸಾಕ್ಷಿಗಳ ಸಮೇತ ಹೈಕೋರ್ಟ್ ದಾವೆ ಹೂಡಲು 108 ಹನುಮ ಭಕ್ತರು ಸಿದ್ಧರಾಗಿದ್ದು, ಹನುಮ ಮಂದಿರ ಕೆಡವಿ ಟಿಪ್ಪು ಮಸೀದಿ ಕಟ್ಟಿರುವುದಾಗಿ ಆರೋಪಿಸಿ ಈ ನ್ಯಾಯಾಂಗ ಹೋರಾಟ ನಡೆಯಲಿದೆ ಎಂದು ಭಜರಂಗ ಸೇನೆ ರಾಜ್ಯಾಧ್ಯಕ್ಷ ಮಂಜುನಾಥ್ ತಿಳಿಸಿದ್ದಾರೆ.

Team Newsnap
Leave a Comment

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024