ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಶಿಕ್ಷಣ ಸಚಿವರು ರದ್ದುಪಡಿಸಿದ್ದಾರೆ.
ಆದರೆ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಎರಡು ಹಂತಗಳಲ್ಲಿ ನಡೆಸುವುದಾಗಿ ಸಚಿವರು ಹೇಳಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ಕಿಡಿಕಾರಿರುವ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಇದು ಮತಿಹೀನ ನಿರ್ಧಾರ ಎಂದು ಕಟುವಾಗಿ ಟೀಕಿಸಿದರು .
ಕುಮಾರಸ್ವಾಮಿ ಸರಣಿ ಟ್ವಿಟ್ ನಲ್ಲಿ ಹೇಳಿರುವ ಅಂಶಗಳು :
- ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ.
- ಮತಿಗೆಟ್ಟಂತೆ ವರ್ತಿಸುತ್ತಿರುವ ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ ಕಂಡು ರಾಜ್ಯದ ಜನತೆ ಹಾದಿ ಬೀದಿಯಲ್ಲಿ ನಗಾಡುವಂತಾಗಿದೆ. ಸರ್ಕಾರ ತಕ್ಷಣ ಇಂತಹ ಮತಿ ಹೀನ ನಿರ್ಧಾರದಿಂದ ಹಿಂದೆ ಸರಿಯಬೇಕು.
- ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ. ಎಸ್ ಎಸ್ ಎಲ್ ಸಿ ಮಕ್ಕಳಿಗೆ ಸೀಮಿತ ವಿಷಯಗಳ ಪರೀಕ್ಷೆ ಎಂಬ ಮೊಂಡುತನವನ್ನು ಸರ್ಕಾರ ಕೈಬಿಡಬೇಕು.
- ಎಸ್ಎಸ್ಎಲ್ಸಿ ಮತ್ತು ಪಿಯುಸಿ ಮಕ್ಕಳಿಗೆ ಏಕರೂಪ ಪರೀಕ್ಷಾ ಪದ್ಧತಿಯನ್ನು ಜಾರಿಗೆ ತರಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ ಎಂದಾದರೆ ಅದು ಅವರಿಗಿಂತ ಕಿರಿಯರಾದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೂ ಅನ್ವಯಿಸಬೇಕು.
- ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿದ್ದಕ್ಕೆ ಪ್ರಧಾನಮಂತ್ರಿಯ ‘ಗುಮ್ಮ’ ಕಾರಣ. ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವ ಬೃಹಸ್ಪತಿ ಶಿಕ್ಷಣ ಸಚಿವರೋ? ಪೋಷಕರು, ವಿದ್ಯಾರ್ಥಿಗಳ ತಾಳ್ಮೆ ಕೆಣಕುವ ಪರೀಕ್ಷಾಮಂತ್ರಿಯೋ ?
- ಪರೀಕ್ಷೆಯಲ್ಲಿ ಪಾಸಾಗುವ ಏಳೆಂಟು ಲಕ್ಷ ಮಂದಿ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನಾಯಸವಾಗಿ ಸೀಟು ದಕ್ಕಿಸಿಕೊಳ್ಳಲು ವ್ಯವಸ್ಥೆ ಮಾಡುವ ಕಡೆ ಚಿತ್ತ ಹರಿಸಲಿ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ