ಕುಂಭಮೇಳಕ್ಕೆ ತೆರಳಲು ಭಕ್ತರಿಂದ ದೆಹಲಿ ರೈಲು ನಿಲ್ದಾಣ ತೀವ್ರವಾಗಿ ಜನಸಂದಣಿಗೊಂಡಿತ್ತು. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಎರಡು ವಿಶೇಷ ರೈಲುಗಳ ವ್ಯವಸ್ಥೆ ಮಾಡಿದ್ದರು. ಆದರೆ, ಭುವನೇಶ್ವರಕ್ಕೆ ತೆರಳಬೇಕಿದ್ದ ರಾಜಧಾನಿ ಮತ್ತು ಸ್ವತಂತ್ರ ಸೇನಾನಿ ಎಕ್ಸ್ಪ್ರೆಸ್ ರೈಲುಗಳು ತಡವಾಗಿ ಬಂದ ಕಾರಣ, ನಿಲ್ದಾಣದಲ್ಲಿ ಜನರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿತು.
ಈ ನಡುವೆ ಪ್ಲಾಟ್ಫಾರ್ಮ್ 14 ಮತ್ತು 15ರಲ್ಲಿ ಪ್ರಯಾಗ್ರಾಜ್ಗೆ ಹೊರಟ ವಿಶೇಷ ರೈಲು ನಿಲ್ದಾಣಕ್ಕೆ ಆಗಮಿಸಿದಾಗ, ಸಾವಿರಾರು ಭಕ್ತರು ಏಕಾಏಕಿ ರೈಲಿಗೆ ಏರುವ ಪ್ರಯತ್ನದಲ್ಲಿ ತಡೆಹಿಡಿಯಲಾಗದ ಅವ್ಯವಸ್ಥೆ ಉಂಟಾಯಿತು. ಪರಿಣಾಮ ರೈಲಿನ ಒಳಗೂ ಹೊರಗೂ ಭೀಕರ ಕಾಲ್ತುಳಿತ ಸಂಭವಿಸಿತು. ಈ ದುರಂತದಲ್ಲಿ 18 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.ಇದನ್ನು ಓದಿ –ಕಾಲೆಳೆಯುವವರು ಇರಲಿ
ಘಟನೆಯ ನಂತರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆಗೆ ಆದೇಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು