Main News

ಮೃತದೇಹದೊಂದಿಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ!

ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದಿದ್ದರಿಂದ ಆಕ್ರೋಶಗೊಂಡ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಏಣಗಿ ಗ್ರಾಮಸ್ಥರು ಸೋಮವಾರ ಬೆಳಗ್ಗೆಯೇ ಶವದೊಂದಿಗೆ ಬಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ಮಾಡಿದ ಘಟನೆ ನಡೆದಿದೆ.

ಏಣಗಿ ಗ್ರಾಮದ ಅಬ್ದುಲ್ ಖಾದರ್ ಮಿಶ್ರಿಕೋಟಿ (65) ಭಾನುವಾರ ರಾತ್ರಿ ಮೃತಪಟ್ಟಿದ್ದರು, ಹೀಗಾಗಿ ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದೆ ಅಸಮಾಧಾನಗೊಂಡ ಗ್ರಾಮಸ್ಥರು ಮೃತದೇಹದೊಂದಿಗೆ ಆಗಮಿಸಿ ಧರಣಿ ಆರಂಭಿಸಿದ್ದರು. ಗ್ರಾಮದ ಲಿಂಗಾಯತ ಮತ್ತು ಮುಸ್ಲಿಂ ಸಮುದಾಯಗಳಡರಡೂ ಜನರಿಗೆ ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದ್ದರಿಂದ ಅಂತ್ಯಸಂಸ್ಕಾರ ನಡೆಸಲು ತೊಂದರೆ ಆಗುತ್ತಿತ್ತು. ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ದಾರಿ ನಿರ್ಮಿಸಿಕೊಡುವ ಭರವಸೆ ನೀಡಿದ ನಂತರ ಧರಣಿ ಕೈಬಿಟ್ಟ ಗ್ರಾಮಸ್ಥರು ಮೃತದೇಹದೊಂದಿಗೆ ಮರಳಿ ಗ್ರಾಮಕ್ಕೆ ತೆರಳಿದ್ದಾರೆ. ಇದನ್ನು ಓದಿ – ಕೃಷಿಹೊಂಡದಲ್ಲಿ ಈಜಲು ಹೋಗಿ ಬೆಂಗಳೂರಿನ ಯುವಕರಿಬ್ಬರು ಜಲ ಸಮಾಧಿ

ಇದೇ ಸಂದರ್ಭದಲ್ಲಿ ಧರಣಿ ಸ್ಥಳಕ್ಕೆ ಆಗಮಿಸಿದ ರೈತ ಸಂಘಟನೆ ಮುಖಂಡರು, ಸತತವಾಗಿ ಮನವಿ ನೀಡುತ್ತ ಬಂದರೂ ಶಾಸಕರು, ಅಧಿಕಾರಿಗಳು ಕಣ್ತೆರೆದು ನೋಡುತ್ತಿಲ್ಲ. ಇದರಿಂದ ಸಾವು ಸಂಭವಿಸಿದಾಗಲೆಲ್ಲ ಗ್ರಾಮಸ್ಥರು ಸಮಸ್ಯೆ ಎದುರಿಸುವಂತಾಗಿದೆ. ಈ ಬಾರಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಂತ್ಯ ಸಂಸ್ಕಾರ ನಡೆಸುವುದಾಗಿ ಪಟ್ಟು ಹಿಡಿದಾಗ ರೈತ ಮುಖಂಡರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.

’50 ವರ್ಷಗಳಿಂದ ಗ್ರಾಮದಲ್ಲಿ ಇದೇ ಸಮಸ್ಯೆ ನಡೆಯುತ್ತಿದೆ. ಗ್ರಾಮದಾಚೆ ಹೂಳಲು ಜಾಗ ಇದ್ದರೂ ಅಲ್ಲಿಗೆ ಹೋಗಲು ಮಧ್ಯ ಇರುವ ಹೊಲದ ಮಾಲೀಕರು ದಾರಿ ಕೊಡುತ್ತಿಲ್ಲ. ಗ್ರಾಮದಲ್ಲಿ ಲಿಂಗಾಯತ್, ಮುಸ್ಲಿಂ ಸಮಾಜದವರು ಯಾರೇ ಸತ್ತರೂ ಸಂಬಂಧಿಕರಿಗಿಂತ ಮುಂಚೆ ಪೊಲೀಸರಿಗೆ ಕರೆ ಮಾಡುವುದಾಗುತ್ತಿದೆ. ಈ ಕುರಿತು ಸಾಕಷ್ಟು ಸಾರಿ ಶಾಸಕರು, ಅಧಿಕಾರಿಗಳಿಗೆ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಈ ಪರಿಸ್ಥಿತಿಗೆ ಅಂತ್ಯ ಹಾಡಲು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದೇವೆ. ಸ್ಷಷ್ಟ ಭರವಸೆ ನೀಡದಿದ್ದರೆ ಜಿಲ್ಲಾಧಿಕಾರಿ ಆವರಣದಲ್ಲಿಯೇ ಅಂತ್ಯಸಂಸ್ಕಾರ ಮಾಡುತ್ತೇವೆ ಎಂದು ಮೃತನ ಸಂಬಂಧಿ ಇಬ್ರಾಹಿಂ ಹೇಳಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024