ಸ್ಟಾರ್ ಕ್ಯಾಂಪೇನ್ನ ಮೂಲಕ ಯಾವುದೇ ಮತದಾರರನ್ನು ಸೆಳೆಯಲು ಸಾಧ್ಯವಿಲ್ಲ ಎಂದು ಹೆಚ್.ಡಿ. ಕುಮಾರಸ್ವಾಮಿ ಶುಕ್ರವಾರ ಶಿರಾದಲ್ಲಿ ಹೇಳಿದರು.
ಶಿರಾದ ಉಪಚುಣಾವಣೆಯ ಪ್ರಚಾರದಲ್ಲಿ ತೊಡಗಿದ್ದ ಕುಮಾರಸ್ವಾಮಿ ಸುದ್ದಿ ಗಾರರೊಂದಿಗೆ ಮಾತನಾಡಿ ‘ಮಂಡ್ಯದ ಲೋಕಸಭಾ ಚುಣಾವಣೆಯಲ್ಲಿ ರೈತ ಸಂಘ, ಬಿಜೆಪಿ, ಮಾಧ್ಯಮಗಳು ಅನುಕಂಪಪೂರಿತ ಒಲವು, ಕರುಣೆ ತೋರಿದುದರಿಂದ ಸುಮಲತಾ ಚುಣಾವಣೆಯಲ್ಲಿ ಗೆದ್ದರು. ಈಗ ಚಿತ್ರತಾರೆಗಳನ್ನು ಕರೆದುಕೊಂಡು ಬಂದು ಪ್ರಚಾರ ಮಾಡಿಸುತ್ತಿದ್ದಾರೆ. ಸ್ಟಾರ್ ಕ್ಯಾಂಪೇನ್ ನಿಂದ ಯಾವುದೇ ರೀತಿಯಲ್ಲೂ ಮತದಾರರನ್ನು ಸೆಳೆಯಲು ಸಾಧ್ಯವಿಲ್ಲ’ ಎಂದು ಬಿಜೆಪಿ ಪರ ಪ್ರಚಾರ ಮಾಡಲು ಒಪ್ಪಿರುವ ದರ್ಶನ್ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಗೃಹ ಸಚಿವ ಆರ್. ಅಶೋಕ್ ಸೇರಿದಂತೆ ಶಿರಾಗೆ ಭೇಟಿ ನೀಡಿ ಟಾಟಾ ಮಾಡಿ ಹೋಗಿದ್ದಾರೆ. ಆದರೆ ಇಲ್ಲಿನ ಸಮಸ್ಯೆಗಳ ಬಗ್ಗೆ ಯಾರು ಕೂಲಂಕುಶವಾಗಿ ಪರಶೀಲನೆ ನಡೆಸಿದ್ದಾರೆ? ಸಮಸ್ಯೆಗಳಿಗೆ ಪರಿಹಾರ ನೀಡುವ ಪ್ರಯತ್ನ ಯಾರು ಮಾಡಿದ್ದಾರೆ? ಎಂದು ಪ್ರಶ್ನೆಗಳ ಮಳೆಗರೆದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು