ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯ ಮತದಾನ ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ನಡೆದ ಶಾಂತಿಯುತವಾಗಿ ಶೇ.74.14 ರಷ್ಟು ಮತದಾನವಾಗಿದೆ.
ಬೆಳಿಗ್ಗೆ 7ರಿಂದ ಸಂಜೆ 5 ರ ವರೆಗೆ ನಡೆದ ಮತದಾನದಲ್ಲಿ ಮತದಾರರು ಉತ್ಸಾಹದಿಂದ ಬಿರುಸಿನಿಂದಲೇ ಮತದಾನ ಮಾಡಿದರು.
68096 ಮತದಾರರಿಂದ ಹಕ್ಕು ಚಲಾವಣೆ:
ಜಿಲ್ಲೆಯಲ್ಲಿ ನಾಲ್ಕು ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿತ್ತು.
ಒಟ್ಟು 16 ಮಂದಿ ಕಣದಲ್ಲಿದ್ದರು. ಜಿಲ್ಲೆಯಲ್ಲಿ ಒಟ್ಟು 91845 ಮತದಾರರ ಪೈಕಿ 68096 ಜನರು ಮತದಾನ ಮಾಡಿದ್ದಾರೆ.
ಯಾವ ತಾಲೂಕಿನಲ್ಲಿ ಎಷ್ಟು ?
ಮಂಡ್ಯ 22122,
ಮದ್ದೂರು17678
,ನಾಗಮಂಗಲ 11612,
ಶ್ರೀರಂಗಪಟ್ಟಣ 3275
ಮಳವಳ್ಳಿ 6582
ಪಾಂಡವಪುರ 3125
ಕೆ.ಆರ್.ಪೇಟೆ 3702
ಮಂದಿ ಮತದಾನ ಮಾಡಿದ್ದಾರೆ.
ಅಭ್ಯರ್ಥಿಗಳಿಂದ ಮನವಿ:
ಬೆಳಿಗ್ಗೆ7 ಕ್ಕೆ ಆರಂಭವಾದ ಮತದಾನ ಸಂಜೆ 5 ರವರೆಗೂ ನಡೆಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಮುಂದಾಗಿದ್ದರು.
ಮಂಡ್ಯದ ಮಹಿಳಾ ಕಾಲೇಜು, ಕಲ್ಲು ಕಟ್ಟಡ ಹಾಗೂ ಗುತ್ತಲು ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಮತದಾನ ನಡೆಯಿತು.
ಮತದಾನಕ್ಕೆ ಆಗಮಿಸುವ ಮತದಾರರನ್ನು ಅಭ್ಯರ್ಥಿಗಳ ಕಡೆಯವರು ಅಡ್ಡಗಟ್ಟುತ್ತಾ ತಮ್ಮ ಕಡೆಯ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡುತ್ತಾ ಕರಪತ್ರಗಳನ್ನು ನೀಡುತ್ತಿದ್ದರು.
ಕಡೆಯ ಗಳಿಗೆಯಲ್ಲೂ ಮತದಾರರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು