Mandya

ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ : ಮಂಡ್ಯದಲ್ಲಿ ಶೇ 74. 14 ರಷ್ಟು ಮತದಾನ

ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯ ಮತದಾನ ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ನಡೆದ ಶಾಂತಿಯುತವಾಗಿ ಶೇ.74.14 ರಷ್ಟು ಮತದಾನವಾಗಿದೆ.

ಬೆಳಿಗ್ಗೆ 7ರಿಂದ ಸಂಜೆ 5 ರ ವರೆಗೆ ನಡೆದ ಮತದಾನದಲ್ಲಿ ಮತದಾರರು ಉತ್ಸಾಹದಿಂದ ಬಿರುಸಿನಿಂದಲೇ ಮತದಾನ ಮಾಡಿದರು.

68096 ಮತದಾರರಿಂದ ಹಕ್ಕು ಚಲಾವಣೆ:

ಜಿಲ್ಲೆಯಲ್ಲಿ ನಾಲ್ಕು ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿತ್ತು.

ಒಟ್ಟು 16 ಮಂದಿ ಕಣದಲ್ಲಿದ್ದರು. ಜಿಲ್ಲೆಯಲ್ಲಿ ಒಟ್ಟು 91845 ಮತದಾರರ ಪೈಕಿ 68096 ಜನರು ಮತದಾನ ಮಾಡಿದ್ದಾರೆ.

ಯಾವ ತಾಲೂಕಿನಲ್ಲಿ ಎಷ್ಟು ?

ಮಂಡ್ಯ 22122,

ಮದ್ದೂರು17678

,ನಾಗಮಂಗಲ 11612,

ಶ್ರೀರಂಗಪಟ್ಟಣ 3275

ಮಳವಳ್ಳಿ 6582

ಪಾಂಡವಪುರ 3125

ಕೆ.ಆರ್.ಪೇಟೆ 3702

ಮಂದಿ ಮತದಾನ ಮಾಡಿದ್ದಾರೆ.

ಅಭ್ಯರ್ಥಿಗಳಿಂದ ಮನವಿ:

ಬೆಳಿಗ್ಗೆ7 ಕ್ಕೆ ಆರಂಭವಾದ ಮತದಾನ ಸಂಜೆ 5 ರವರೆಗೂ ನಡೆಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಮುಂದಾಗಿದ್ದರು.

ಮಂಡ್ಯದ ಮಹಿಳಾ ಕಾಲೇಜು, ಕಲ್ಲು ಕಟ್ಟಡ ಹಾಗೂ ಗುತ್ತಲು ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಮತದಾನ ನಡೆಯಿತು.

ಮತದಾನಕ್ಕೆ ಆಗಮಿಸುವ ಮತದಾರರನ್ನು ಅಭ್ಯರ್ಥಿಗಳ ಕಡೆಯವರು ಅಡ್ಡಗಟ್ಟುತ್ತಾ ತಮ್ಮ ಕಡೆಯ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡುತ್ತಾ ಕರಪತ್ರಗಳನ್ನು ನೀಡುತ್ತಿದ್ದರು.
ಕಡೆಯ ಗಳಿಗೆಯಲ್ಲೂ ಮತದಾರರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದರು.

Team Newsnap
Leave a Comment
Share
Published by
Team Newsnap

Recent Posts

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024