Trending ರಾಜ್ಯ ಬಜೆಟ್ ಮಂಡನೆ : ಯಡಿಯೂರಪ್ಪ ಮಂಡಿಸಿದ ಆಯವ್ಯಯದ ಹೈಲೈಟ್ಸ್
ಏರುತ್ತಲೇ ಇರುವ ಪೆಟ್ರೋಲ್ ಬೆಲೆ, ಉದ್ಯೋಗ ಕಡಿತ, ಕರೋನಾ ಸಂಕಷ್ಟದ ನಡುವೆ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯ ಬಜೆಟ್ ಮಂಡಿಸಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸ್ವತಃ ಹಣಕಾಸು ಸಚಿವರು ಆಗಿರುವ ಸಿಎಂ ಮಂಡಿಸಿರುವ ಬಜೆಟ್ ನ ಹೈಲೈಟ್ಸ್
- ಉದ್ಯೋಗ ಸೃಷ್ಟಿಗಾಗಿ ಹಾಗೂ ಮಹಿಳೆಯರು ಮಕ್ಕಳ ಬಲವರ್ಧನೆಗಾಗಿ ಬೆಂಗಳೂರಿನ ಸುತ್ತಮುತ್ತ ಇರುವ ಅಂಗನವಾಡಿಗಳನ್ನು ಶಿಶುಪಾಲನಾ ಕೇಂದ್ರವಾಗಿ ಉನ್ನತೀಕರಿಸುವುದು.
- ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಗೆ ರಾಜ್ಯದ ಆಯ್ದ ಜಿಲ್ಲೆಗಳಲ್ಲಿ 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ
- ಆಡಳಿತ ವ್ಯವಸ್ಥೆಯಲ್ಲಿ ದಕ್ಷತೆ ಹೆಚ್ಚಿಸಲು ಸುಧಾರಣಾ ಆಯೋಗ
ಮನೆಬಾಗಿಲಿಗೆ ಮಾಸಾಶನ ಅಭಿಯಾನ ಆರಂಭ - 58 ಆಣೆಕಟ್ಟುಗಳ ಪುನಶ್ಚೇತನ ಹಾಗೂ ಅಭಿವೃದ್ಧಿಗಾಗಿ ಅನುದಾನ
ಉತ್ತರ ಕನ್ನಡ ಜಿಲ್ಲೆ ಹಾಗೂ ಕರಾವಳಿಯಲ್ಲಿ ಖಾರ್ ಲ್ಯಾಂಡ್ ಅಭಿವೃದ್ಧಿ ಯೋಜನೆ - ಸಣ್ಣ ಉದ್ಯಮ ನಡೆಸುವ ಮಹಿಳೆಯರಿಗೆ ಸುರಕ್ಷತೆ, ಬ್ರ್ಯಾಡಿಂಗ್ ಸೇರಿದಂತೆ ಅಗತ್ಯ ತಾಂತ್ರಿಕ ನೆರವು
ಪೆಟ್ರೋಲ್-ಡಿಸೇಲ್ ಮೇಲಿನ ಕೆಎಸ್ಟಿ ಯಥಾಸ್ಥಿತಿ ಮುಂದುವರಿಕೆ. - ಬೆಂಗಳೂರಿನ ಹೆಸರಘಟ್ಟದಲ್ಲಿ ಥೀಮ್ಸ್ ಪಾರ್ಕ್ ನಿರ್ಮಾಣ
- ತುಮಕೂರಿನ ಸಿದ್ಧಗಂಗಾಶ್ರೀಗಳ ಪ್ರತಿಮೆ ನಿರ್ಮಾಣ ಹಾಗೂ ವಸ್ತುಪ್ರದರ್ಶನಾಲಯಕ್ಕೆ 2 ಕೋಟಿ ನೆರವು
- ಕೊಪ್ಪಳದಲ್ಲಿ ಸಂವರ್ಧನಾ ಕೇಂದ್ರ ನಿರ್ಮಾಣ.
- ನೂತನ ಜಿಲ್ಲೆ ವಿಜಯನಗರಕ್ಕೆ ಮೂಲಭೂತ ಸೌಲಭ್ಯ ಒದಗಿಸಲು ವಿಶೇಷ ಆದ್ಯತೆ
- ರಾಜ್ಯದ ಆಸ್ಪತ್ರೆಗಳಲ್ಲಿ ಜ್ಯೋತಿ ಸಂಜೀವಿನಿ ಯೋಜನೆಯಡಿ ಅಗತ್ಯ ತುರ್ತು ಉಚಿತ ಶಸ್ತ್ರಚಿಕಿತ್ಸೆಗೆ ಅವಕಾಶ.
- ರಾಜ್ಯದ ಹಲವು ಜಿಲ್ಲೆಗಳಿಗೆ ವಿಶೇಷ ಯೋಜನೆಗಳ ಜೊತೆ 2021-22 ನೇ ಸಾಲಿನ ರಾಜ್ಯ ಆಯವ್ಯಯ ಮಂಡನೆಯಾಗಿದೆ.
- ಬೆಂಗಳೂರು ಹಾಗೂ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಗೆ ಸಾಕಷ್ಟು ಯೋಜನೆಗಳನ್ನು ಸರ್ಕಾರ ಘೋಷಿಸಿದೆ.
- ಹೊಸ ಯೋಜನೆಗಳ ಘೋಷಣೆಗಿಂತ ಯಾವುದೇ ಹೊಸ ತೆರಿಗೆ ವಿಧಿಸದೇ ಜನರನ್ನು ಸಿಎಂ ಬಿಎಸ್ವೈ ಹೆಚ್ಚಿನ ಹೊರೆಯಿಂದ ಕಾಪಾಡಿದ್ದಾರೆ
Recent Posts
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment