Trending

ರಾಜ್ಯ ಬಜೆಟ್ ಮಂಡನೆ : ಯಡಿಯೂರಪ್ಪ ಮಂಡಿಸಿದ ಆಯವ್ಯಯದ ಹೈಲೈಟ್ಸ್

ಏರುತ್ತಲೇ ಇರುವ ಪೆಟ್ರೋಲ್ ಬೆಲೆ, ಉದ್ಯೋಗ ಕಡಿತ, ಕರೋನಾ ಸಂಕಷ್ಟದ ನಡುವೆ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯ ಬಜೆಟ್ ಮಂಡಿಸಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸ್ವತಃ ಹಣಕಾಸು ಸಚಿವರು ಆಗಿರುವ ಸಿಎಂ ಮಂಡಿಸಿರುವ ಬಜೆಟ್ ನ ಹೈಲೈಟ್ಸ್

  • ಉದ್ಯೋಗ ಸೃಷ್ಟಿಗಾಗಿ ಹಾಗೂ ಮಹಿಳೆಯರು ಮಕ್ಕಳ ಬಲವರ್ಧನೆಗಾಗಿ ಬೆಂಗಳೂರಿನ ಸುತ್ತಮುತ್ತ ಇರುವ ಅಂಗನವಾಡಿಗಳನ್ನು ಶಿಶುಪಾಲನಾ ಕೇಂದ್ರವಾಗಿ ಉನ್ನತೀಕರಿಸುವುದು.
  • ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಗೆ ರಾಜ್ಯದ ಆಯ್ದ ಜಿಲ್ಲೆಗಳಲ್ಲಿ 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ
  • ಆಡಳಿತ ವ್ಯವಸ್ಥೆಯಲ್ಲಿ ದಕ್ಷತೆ ಹೆಚ್ಚಿಸಲು ಸುಧಾರಣಾ ಆಯೋಗ
    ಮನೆಬಾಗಿಲಿಗೆ ಮಾಸಾಶನ ಅಭಿಯಾನ ಆರಂಭ
  • 58 ಆಣೆಕಟ್ಟುಗಳ ಪುನಶ್ಚೇತನ ಹಾಗೂ ಅಭಿವೃದ್ಧಿಗಾಗಿ ಅನುದಾನ
    ಉತ್ತರ ಕನ್ನಡ ಜಿಲ್ಲೆ ಹಾಗೂ ಕರಾವಳಿಯಲ್ಲಿ ಖಾರ್ ಲ್ಯಾಂಡ್ ಅಭಿವೃದ್ಧಿ ಯೋಜನೆ
  • ಸಣ್ಣ ಉದ್ಯಮ ನಡೆಸುವ ಮಹಿಳೆಯರಿಗೆ ಸುರಕ್ಷತೆ, ಬ್ರ್ಯಾಡಿಂಗ್ ಸೇರಿದಂತೆ ಅಗತ್ಯ ತಾಂತ್ರಿಕ ನೆರವು
    ಪೆಟ್ರೋಲ್-ಡಿಸೇಲ್ ಮೇಲಿನ ಕೆಎಸ್ಟಿ ಯಥಾಸ್ಥಿತಿ ಮುಂದುವರಿಕೆ.
  • ಬೆಂಗಳೂರಿನ ಹೆಸರಘಟ್ಟದಲ್ಲಿ ಥೀಮ್ಸ್ ಪಾರ್ಕ್ ನಿರ್ಮಾಣ
  • ತುಮಕೂರಿನ ಸಿದ್ಧಗಂಗಾಶ್ರೀಗಳ ಪ್ರತಿಮೆ ನಿರ್ಮಾಣ ಹಾಗೂ ವಸ್ತುಪ್ರದರ್ಶನಾಲಯಕ್ಕೆ 2 ಕೋಟಿ ನೆರವು
  • ಕೊಪ್ಪಳದಲ್ಲಿ ಸಂವರ್ಧನಾ ಕೇಂದ್ರ ನಿರ್ಮಾಣ.
  • ನೂತನ ಜಿಲ್ಲೆ ವಿಜಯನಗರಕ್ಕೆ ಮೂಲಭೂತ ಸೌಲಭ್ಯ ಒದಗಿಸಲು ವಿಶೇಷ ಆದ್ಯತೆ
  • ರಾಜ್ಯದ ಆಸ್ಪತ್ರೆಗಳಲ್ಲಿ ಜ್ಯೋತಿ ಸಂಜೀವಿನಿ ಯೋಜನೆಯಡಿ ಅಗತ್ಯ ತುರ್ತು ಉಚಿತ ಶಸ್ತ್ರಚಿಕಿತ್ಸೆಗೆ ಅವಕಾಶ.
  • ರಾಜ್ಯದ ಹಲವು ಜಿಲ್ಲೆಗಳಿಗೆ ವಿಶೇಷ ಯೋಜನೆಗಳ ಜೊತೆ 2021-22 ನೇ ಸಾಲಿನ ರಾಜ್ಯ ಆಯವ್ಯಯ ಮಂಡನೆಯಾಗಿದೆ.
  • ಬೆಂಗಳೂರು ಹಾಗೂ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಗೆ ಸಾಕಷ್ಟು ಯೋಜನೆಗಳನ್ನು ಸರ್ಕಾರ ಘೋಷಿಸಿದೆ.
  • ಹೊಸ ಯೋಜನೆಗಳ ಘೋಷಣೆಗಿಂತ ಯಾವುದೇ ಹೊಸ ತೆರಿಗೆ ವಿಧಿಸದೇ ಜನರನ್ನು ಸಿಎಂ ಬಿಎಸ್ವೈ ಹೆಚ್ಚಿನ ಹೊರೆಯಿಂದ ಕಾಪಾಡಿದ್ದಾರೆ
Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024