ಲಸಿಕೆ ಹಾಕುವ ಅಣಕು ಕಾರ್ಯದಿಂದ ಸಿಬ್ಬಂದಿಗೆ ತರಬೇತಿ ದೊರೆತಿದೆ. ಜನವರಿಯಲ್ಲೇ ಲಸಿಕೆ ದೊರೆಯುವ ನಿರೀಕ್ಷೆ ಇದೆ. ಲಸಿಕೆ ಸಿಕ್ಕ ಬಳಿಕ ವಿತರಿಸಲು ಈ ಅಣಕು ಕಾರ್ಯ ನೆರವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಯಲಹಂಕ ಸಾರ್ವಜನಿಕ ಆಸ್ಪತ್ರೆಯ ಮಾದರಿ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು ಲಸಿಕೆ ವಿತರಣೆಯ ಅಣಕು ಕಾರ್ಯವನ್ನು ಪರಿಶೀಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಐದು ಕಡೆ ಲಸಿಕೆ ನೀಡುವ ಅಣಕು ಪ್ರಯೋಗ ನಡೆಯುತ್ತಿದೆ. ಯಲಹಂಕ ಆಸ್ಪತ್ರೆಯಲ್ಲಿ 25 ಮಂದಿಗೆ (ಅಣಕು) ಲಸಿಕೆ ನೀಡಲಾಗುತ್ತಿದೆ. ಶಿಷ್ಟಾಚಾರದಂತೆ ಲಸಿಕೆ ಹಾಕುವ ಅಣಕು ಪ್ರಕ್ರಿಯೆ ನಡೆಯುತ್ತಿದೆ. ಲಸಿಕೆ ಬಂದ ಬಳಿಕ ಈ ಅಭ್ಯಾಸ ನೆರವಾಗಲಿದೆ. ಜನವರಿಯಲ್ಲೇ ಲಸಿಕೆ ದೊರೆಯುವ ನಿರೀಕ್ಷೆ ಇದೆ. ಕಳೆದ ಎರಡು ತಿಂಗಳಿಂದ ಸಭೆ ನಡೆಸಿ, ಆಸ್ಪತ್ರೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದರು.
ಕೊರೊನಾ ಲಸಿಕೆಯನ್ನು ಕೊರೊನಾ ಯೋಧರಿಗೆ ಮೊದಲ ಹಂತದಲ್ಲಿ ಉಚಿತವಾಗಿ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ. ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಕೇಂದ್ರ ನೀಡಲಿದೆ. ಅದರಂತೆ, ಕ್ರಮ ವಹಿಸಲಾಗುವುದು. ಲಸಿಕೆ ವಿತರಣೆಗೆ ಬೇಕಾದ ಕೋಲ್ಡ್ ಸ್ಟೋರೇಜ್, ಸಾರಿಗೆ ವ್ಯವಸ್ಥೆ, ಸಿಬ್ಬಂದಿ ನೇಮಕ ಮೊದಲಾದ ಸಿದ್ಧತೆ ಪೂರ್ಣಗೊಂಡಿದೆ. ಬೇರೆ ಲಸಿಕೆಗಳನ್ನು ವಿತರಿಸಲು ಬೇಕಿರುವ ಮೂಲಸೌಕರ್ಯಗಳು ನಮ್ಮಲ್ಲಿವೆ. ಇದನ್ನು ಕೂಡ ಕೊರೊನಾ ಲಸಿಕೆ ಸಂಗ್ರಹ, ವಿತರಣೆಗೆ ಬಳಸಿಕೊಳ್ಳಲಾಗುವುದು ಎಂದರು.
10 ಮಂದಿಗೆ ರೂಪಾಂತರ ವೈರಸ್ :
ಯುನೈಟೆಡ್ ಕಿಂಗ್ ಡಮ್ ನಿಂದ ಬಂದವರಲ್ಲಿ 42 ರಲ್ಲಿ 32 ಮಂದಿಗೆ ಕೊರೊನಾ ಪಾಸಿಟಿವ್ ಆಗಿತ್ತು. 10 ಜನರಿಗೆ ರೂಪಾಂತರಗೊಂಡ ಕೊರೊನಾ ವೈರಾಣು ಇರುವುದು ದೃಢವಾಗಿದೆ. ಈ ಹತ್ತು ಮಂದಿಗೆ ತೀವ್ರವಾದ ಸಮಸ್ಯೆ ಇಲ್ಲ. ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಉತ್ತಮ ಚಿಕಿತ್ಸೆ ನೀಡುತ್ತಿದ್ದು, ಬೇಗನೆ ಗುಣಮುಖರಾಗುವ ವಿಶ್ವಾಸವಿದೆ. ಈಗ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. 12 ಲಕ್ಷಕ್ಕೂ ಅಧಿಕ ಜನರು ಗುಣಮುಖರಾಗಿದ್ದಾರೆ. ಇದೇ ರೀತಿ ಇದ್ದರೆ, ಕೊರೊನಾದಿಂದ ಆಪತ್ತು ಎದುರಿಸುವ ದಿನ ದೂರವಾಗಿದೆ ಎನ್ನಬಹುದು ಎಂದರು.
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
This website uses cookies.
Leave a Comment