ಡಿಕೆ ಶಿವಕುಮಾರ್ ವಿರುದ್ಧವೇ ಭ್ರಷ್ಟಾಚಾರದ ಆರೋಪ ಮಾಡಿದ ಮಾಧ್ಯಮ ಸಂಯೋಜಕ ಸಲೀಂ ಅವರನ್ನು 6 ವರ್ಷಗಳ ಕಾಲ ಕಾಂಗ್ರೆಸ್ಸಿನಿಂದ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಉಗ್ರಪ್ಪಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ರೆಹಮಾನ್ ಖಾನ್ ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿ ಈ ಕ್ರಮವನ್ನು ಪ್ರಕಟಿಸಿದ್ದಾರೆ
ಸಲೀಂ ಅವರನ್ನು ತುರ್ತು ಶಿಸ್ತುಪಾಲನಾ ಸಮಿತಿ ಸಭೆಯಲ್ಲಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ಅವರ ಬೇಜವಾಬ್ದಾರಿ ನಡವಳಿಕೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ 6 ವರ್ಷಗಳವರೆಗೆ ಉಚ್ಚಾಟಿಸಲಾಗಿದೆ.
ಉಗ್ರಪ್ಪಗೆ ನೋಟಿಸ್:
ಡಿಕೆ ಶಿವಕುಮಾರ್ ಘನತೆ ಗೌರವವಗಳಿಗೆ ಕುಂದುಂಟುವಾಗುವಂತೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಪಾರ ಹಾನಿ ಉಂಟಾಗುವ ಅಪಾರ ವಿಚಾರಗಳನ್ನು ಮಾತನಾಡಿದ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಹಿನ್ನೆಲೆಯಲ್ಲಿ ಈ ನಡವಳಿಕೆಯ ಬಗ್ಗೆ ತಕ್ಷಣ ಸಮಜಾಯಿಷಿಯನ್ನು ಮೂರು ದಿನದ ಒಳಗಡೆ ನೀಡಬೇಕು ಎಂದು ನೋಟಿಸ್ ನಲ್ಲಿ ಸೂಚಿಸಲಾಗಿದೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ