ಪೊಲೀಸರ ನೋಟಿಸ್ಗೆ ಪ್ರತಿಕ್ರಿಯೆ ನೀಡಿರುವ ಹಂಸಲೇಖ ಅನಾರೋಗ್ಯದ ಹಿನ್ನಲೆಯಲ್ಲಿ ವಿಚಾರಣೆಗೆ ಹಾಜರಾಗಲು ಸಮಯ ಕೊಡುವಂತೆ ಮನವಿ ಮಾಡಿದ್ದಾರೆ.
ಹಂಸಲೇಖ ಮನವಿ ಪುರಸ್ಕರಿಸಿ ವಿಚಾರಣೆಗೆ ಹಾಜರಾಗಲು ಪೋಲೀಸರು ಸಮಯಾವಕಾಶ ನೀಡಿದ್ದಾರೆ.
ದೂರಿನ ಸಂಬಂಧ ಸೋಮವಾರ ವಿಚಾರಣೆಗೆ ಹಾಜರಾಗವುದಾಗಿ ಹಂಸಲೇಖ ತಿಳಿಸಿದ್ದಾರೆ ಎನ್ನಲಾಗಿದೆ.
ಪೇಜಾವರ ಶ್ರೀಗಳ ಕುರಿತು ಅವಹೇಳನಕಾರಿಯಾಗಿ ಮಾತನಡಿರುವ
ಹಂಸಲೇಖರ ನಿಲುವು ಖಂಡಿಸಿದ್ದ ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವಿಪ್ರ ಯುವ ವೇದಿಕೆ ಅವರ ವಿರುದ್ಧ ದೂರು ದಾಖಲಿಸಿತ್ತು.
ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಪ್ರತ್ಯೇಕವಾಗಿ ದೂರು ಸಲ್ಲಿಕೆ ಮಾಡಿತ್ತು. ಈ ಕುರಿತು ವಿಚಾರಣೆ ನಡೆಸಲು ಬಸವನಗುಡಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಆದರೆ ಮೊದಲ ನೋಟಿಸ್ಗೆ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ನೋಟಿಸ್ ಜಾರಿ ಮಾಡಲಾಗಿತ್ತು.