ಉಡುಪಿ ಪೇಜಾವರ ಶ್ರೀಗಳ ಕುರಿತು ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವಹೇಳನ ಕರ ಹೇಳಿಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ.
ಬೆಂಗಳೂರಿನ ಬಸವನಗುಡಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ರದ್ದು ಕೋರಿ ಹಂಸಲೇಖ ರಿಟ್ ಅರ್ಜಿ ಸಲ್ಲಿಕೆ ಸಲ್ಲಿಸಿದ್ದರು
ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಸದ್ಯ ಪ್ರಕರಣದ ತನಿಖೆಗೆ ತಡೆ ನೀಡಿ ಆದೇಶ ನೀಡಿದೆ.
ಹಂಸಲೇಖ ಪರ ವಕೀಲ ಕಾಶೀನಾಥ್, ಸಿಎಸ್ ದ್ವಾರಕಾನಾಥ್ ವಾದ ಮಂಡಿಸಿದ್ದರು.
ಪ್ರಕರಣದ ಸಂಬಂಧ ನವೆಂಬರ್ 25ರಂದು ಬಸವನಗುಡಿ ಠಾಣೆಗೆ ಆಗಮಿಸಿದ್ದ ಹಂಸಲೇಖ ಅವರು ಪೊಲೀಸ್ ವಿಚಾರಣೆಯನ್ನು ಎದುರಿಸಿದ್ದರು.
ಅಂದು ಬಸವನಗುಡಿ ಪೊಲೀಸ್ ಠಾಣೆ ಮುಂಭಾಗ ಹಂಸಲೇಖ ಅವರನ್ನು ಬೆಂಬಲಿಸಿ ನಟ ಚೇತನ್ ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಆಗಮಿಸಿದ್ದರು.
ಭಜರಂಗ ದಳ ಸಂಘಟನೆಯ ಕಾರ್ಯಕರ್ತರು ಹಂಸಲೇಖ ಅವರ ವಿರುದ್ಧ ಪ್ರತಿಭಟನೆ ಮಾಡಿದ್ದರು.