ಈ ನಿರ್ಧಾರದಿಂದಾಗಿ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ.
ಸಾರಿಗೆ ನೌಕರರ ಪ್ರಮುಖ ನಾಯಕ ಅನಂತ ಸುಬ್ಬರಾವ್ ಅವರು ಈಗಾಗಲೇ ಡಿಸೆಂಬರ್ 31 ರಿಂದ ಮುಷ್ಕರ ಆರಂಭವಾಗಲಿದೆ ಎಂದು ಘೋಷಿಸಿದ್ದು, ರಾಜ್ಯದ 6 ಪ್ರಮುಖ ಸಾರಿಗೆ ನೌಕರರ ಸಂಘಟನೆಗಳು ಒಕ್ಕೂಟ ಸೇರಿ ಈ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿವೆ.
ಪ್ರಧಾನ ಬೇಡಿಕೆಗಳಲ್ಲಿ ವೇತನ ಹೆಚ್ಚಳ ಸೇರಿದಂತೆ ವಿವಿಧ ವಿಚಾರಗಳನ್ನು ಸರ್ಕಾರದಿಂದ ಈಡೇರಿಸುವಂತೆ ಸಾರಿಗೆ ನೌಕರರು ಒತ್ತಾಯಿಸಿದ್ದಾರೆ. ಈ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸಿದರೆ, ಬಸ್ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವ ಎಚ್ಚರಿಕೆಯನ್ನು ನೌಕರರು ನೀಡಿದ್ದಾರೆ.
ಕೆ.ಎಸ್.ಆರ್.ಟಿ.ಸಿ., ಬಿ.ಎಂ.ಟಿ.ಸಿ., ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ., ಕೆ.ಕೆ.ಆರ್.ಟಿ.ಸಿ. ಸೇರಿ ನಾಲ್ಕು ನಿಗಮಗಳಿಂದ ಈ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದ್ದು, ರಾಜ್ಯಾದ್ಯಂತ ಪ್ರಯಾಣಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆಯಿದೆ.ಇದನ್ನು ಓದಿ –ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
ಸರ್ಕಾರ ಮತ್ತು ನೌಕರರ ನಡುವೆ ಏನೇನಾದರೂ ಸೂಕ್ತ ತೀರ್ಮಾನಕ್ಕೆ ಬರಲಿಲ್ಲವಾದರೆ, ಈ ಮುಷ್ಕರ ರಾಜ್ಯದ ಸಾರಿಗೆ ವ್ಯವಸ್ಥೆಗೆ ದೊಡ್ಡ ಹೊಡೆತ ನೀಡುವ ಸಾಧ್ಯತೆಯಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು