ಮೈಸೂರಿನ ಮಾತೃಮಂಡಳಿ ಶಾಲೆ ವೃತ್ತದಲ್ಲಿ ರಾತ್ರೋ ರಾತ್ರಿ ಸ್ಥಾಪನೆ ಮಾಡಿದ ಅಂಬೇಡ್ಕರ್ ಪ್ರತಿಮೆ ತೆರುವುಗೊಳಿಸಿದ ಹಿನ್ನಲೆ ಅಭಿಮಾನಿಯೊಬ್ಬ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜರುಗಿದೆ
ಹೂಟಗಳ್ಳಿ ನಿವಾಸಿ ಸತೀಶ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರತಿಮೆ ತೆರುವುಗೊಳಿಸಿದ ವಿಚಾರವಾಗಿ ಪೊಲೀಸರೊಂದಿಗೆ ಮಾತನ ಚಕಮಕಿ ನಡೆದಿದೆ.
ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಲು ಅವಕಾಶ ನೀಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಸತೀಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಪಾಲಿಕೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.
ಮಾತೃಮಂಡಳಿ ವೃತ್ತದಲ್ಲಿ ಉಧ್ವಿಘ್ನದ ಸ್ಥಿತಿ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನೂರಾರು ಪೊಲೀಸರನ್ನ ನಿಯೋಜಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ