ಹೋಟೆಲ್ಗೆ ತಿಂಡಿ ತಿನ್ನಲು ಬಂದಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಟರಾಜ್ ಪುತ್ರ ನಿತಿನ್(25) ಸಾವನ್ನಪ್ಪಿರುವ ಯುವಕ ನಿತಿನ್ ಎಲ್ಎಲ್ಬಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ನಿತಿನ್ ತಿಂಡಿ ತಿನ್ನಲು ಸ್ನೇಹಿತನೊಂದಿಗೆ ಹುಣಸೂರು ಪಟ್ಟಣದ ಹೋಟೆಲ್ ಗೆ ತೆರಳಿ ತಿಂಡಿಗೆ ಆಡ್೯ರ್ ಮಾಡಿದ್ದಾರೆ. ಈ ವೇಳೆ ತಿಂಡಿ ಬರುವಷ್ಟರಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ.
ತಕ್ಷಣವೇ ಆತನ ಸ್ನೇಹಿತರು ನಿತಿನ್ ನನ್ನು ಉಪಚರಿಸಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆ ವೇಳೆಗೆ ನಿತಿನ್ ಪ್ರಾಣಪಕ್ಷಿ ಹಾರಿಹೋಗಿತ್ತು. ಯುವಕ ಹೋಟೆಲ್ ನಲ್ಲಿದ್ದ ಕೊನೆ ಕ್ಷಣದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿ ವೈರಲ್ ಆಗಿದೆ.
.