Karnataka

ಬೀದರ್ ಮೆಡಿಕಲ್ ಕಾಲೇಜಿನಲ್ಲಿ ಹಿಜಬ್ ಧರಿಸಿ ನರ್ಸಿಂಗ್ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು

ಬೀದರ್ ಮೆಡಿಕಲ್ ಕಾಲೇಜಿನಲ್ಲಿ ಹಿಜಬ್ ಧರಿಸಿ ಬಂದ ಕಾರಣ ಕಳೆದ ಬಾರಿ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಿಲ್ಲ ಎಂಬ ವಿಡಿಯೋ ವೈರಲ್‌ ಆಗಿತ್ತು. ಆದರೆ ಇಂದು ಹಿಜಬ್‌ ಧರಿಸಿ ಬಂದ ಎಲ್ಲಾ ವಿದ್ಯಾರ್ಥಿಯರಿಗೂ ಪರೀಕ್ಷೆಗೆ ಅನುಮತಿ ನೀಡಲಾಯಿತು.

ಹೈಕೋರ್ಟ್‌ ಮಧ್ಯಂತರ ಆದೇಶದ ನಡುವೆಯೂ ಕಾಲೇಜಿಗೆ ಹಿಜಬ್‌ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ನರ್ಸಿಂಗ್‌ ಪರೀಕ್ಷೆ ಬರೆಯಲು ಬೀದರ್‌ನ ಬ್ರೀಮ್ಸ್ ವೈದ್ಯಕೀಯ ಕಾಲೇಜು ಆಡಳಿತ ಮಂಡಳಿ ಅನುಮತಿ ನೀಡಿದೆ.

ಬ್ರೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆಯುತ್ತಿರುವ ಬಿಎಸ್ಸಿ ನರ್ಸಿಂಗ್ ಪರೀಕ್ಷೆಗೆ ಹಿಜಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರ ಹಾಲ್ ಟಿಕೆಟ್ ಹಾಗೂ ಕಾಲೇಜು ಐಡಿ ಕಾರ್ಡ್‌ ತಪಾಸಣೆ ಮಾಡಿ ನರ್ಸಿಂಗ್ ಪರೀಕ್ಷೆಗೆ ಬ್ರೀಮ್ಸ್ ಕಾಲೇಜು ಆಡಳಿತ ಮಂಡಳಿ ಅವಕಾಶ ಕಲ್ಪಿಸಿದೆ.

ಹಿಜಬ್ ಧರಿಸಿ ಬಂದ ಕಾರಣ ಕಳೆದ ಬಾರಿ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಿಲ್ಲ ಎಂಬ ವಿಡಿಯೋ ವೈರಲ್‌ ಆಗಿತ್ತು. ಆದರೆ ಇಂದು ಹಿಜಬ್‌ ಧರಿಸಿ ಬಂದ ಎಲ್ಲಾ ವಿದ್ಯಾರ್ಥಿಯರಿಗೂ ಪರೀಕ್ಷೆಗೆ ಅನುಮತಿ ನೀಡಲಾಯಿತು.

ಈ ಕುರಿತು ಪ್ರತಿಕ್ರಿಯಿಸಿದ ಬ್ರೀಮ್ಸ್ ನಿರ್ದೇಶಕ ಡಾ. ಚಂದ್ರಕಾಂತ್ ಚಿಲ್ಲರ್ಗಿ, ಹಿಜಬ್‌ ವಿಚಾರವಾಗಿ ನಮ್ಮ ಕಾಲೇಜಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಮಾಮೂಲಿಯಂತೆ ವಿದ್ಯಾರ್ಥಿನಿಯರು ಹಿಜಬ್‌ ಧರಿಸಿ ಕಾಲೇಜಿಗೆ ಬಂದಿದ್ದರು.

ಅವರ ಹಾಲ್‌ ಟಿಕೆಟ್‌, ಐಡಿ ಕಾರ್ಡ್‌ ಪರೀಕ್ಷಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದೇವೆ. ಇಂದು 12 ವಿದ್ಯಾರ್ಥಿನಿಯರು ಹಿಜಬ್‌ ಧರಿಸಿ ಬಂದಿದ್ದರು. ಅವರೆಲ್ಲರೂ ಪರೀಕ್ಷೆ ಬರೆದಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More

May 12, 2024

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024