ಪೋಷಕರಿಂದ ಆನ್ ಲೈನ್ ಕ್ಲಾಸ್ಗೆ ತೊಂದರೆ ಆಯ್ತು ಎಂಬ ಕಾರಣಕ್ಕಾಗಿ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಘಟನೆ ಜಿಲ್ಲೆಯ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಜರುಗಿದೆ.
ಗುರುಚರಣ್ ಉಡುಪಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಗುರುಚರಣ್ ಉಡುಪಿಯ ಪ್ರತಿಷ್ಠಿತ ಕಾಲೇಜ್ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ. ವಾಡಿ ಪಟ್ಟಣದ ಬಿರ್ಲಾ ಕ್ವಾಟರ್ಸ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಎರಡು ದಿನದ ಹಿಂದೆ ಆನ್ಲೈನ್ ಕ್ಲಾಸ್ನಲ್ಲಿದ್ದಾಗ ತಂದೆ – ತಾಯಿ ಮಾತನಾಡಿಸಿ ಡಿಸ್ಟರ್ಬ್ ಮಾಡಿದ್ದಾರಂತೆ.
ಈ ವೇಳೆ ಡಿಸ್ಟರ್ಬ್ ಮಾಡಬೇಡ ಅಮ್ಮಾ ಎಂದು ಹೇಳಿದ್ದಾನೆ ಎನ್ನಲಾಗಿದೆ. ನಂತರ ನೊಂದು ಕೊಠಡಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಲಿಸರು ತಿಳಿಸಿದ್ದಾರೆ.
ವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ