January 28, 2026

Newsnap Kannada

The World at your finger tips!

police 1

ತಾಂತ್ರಿಕ ಕಾಲೇಜಿನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು, ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

Spread the love

ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನ ಬಿ.ಟೆಕ್ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ.

ನೃಪತುಂಗ ರಸ್ತೆಯಲ್ಲಿರುವ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಇ ವಿದ್ಯಾರ್ಥಿ ಪವನ್ ಕಲ್ಯಾಣ್ ಕೊಲೆ ಆರೋಪಿ. ಪ್ರೆಸಿಡೆನ್ಸಿ ಕಾಲೇಜಿನ ಲಯಸ್ಮಿತ (19) ಮೃತ ಯುವತಿ.ಹೊಸ ವರ್ಷದ ಪಾರ್ಟಿಗೆ ಹೋದ ಮೂವರು ಯುವಕರು ನದಿಯಲ್ಲಿ ಮುಳುಗಿ ಸಾವು 

ಈ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಪ್ರೀತಿ ವಿಚಾರಕ್ಕೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ರಾಜಾನುಕುಂಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿ, ಗಾಯಾಳು ವಿದ್ಯಾರ್ಥಿಯನ್ನು ಸ್ಪರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಹ ಭೇಟಿ ನೀಡಿ ವಿಚಾರಣೆ ನಡೆಸಲಿದ್ದಾರೆ.

19 ವರ್ಷದ ಲಯಸ್ಮಿತ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಬಿ.ಟೆಕ್ ಓದುತ್ತಿದ್ದಳು. ಇಂದು ಅಲ್ಲಿಗೆ ಬಂದಿದ್ದ ಸ್ಪರ್ಶ್ ಕ್ಲಾಸ್ ರೂಮಿನಲ್ಲಿದ್ದ ಲಯಸ್ಮಿತಾಗೆ ಹೊರಗೆ ಬರಲು ಹೇಳಿದ್ದಾನೆ. ಆಕೆ ಬಂದ ಕೂಡಲೇ 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾನೆ.

ಬಳಿಕ ತಾನೂ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಸ್ಥಳಕ್ಕಾಗಿಮಿಸಿರುವ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪವನ್ ಕಲ್ಯಾಣ್ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.

error: Content is protected !!