ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ ಅನೇಕ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದಾರೆ. ಆದರೆ ಬಾಗಲಕೋಟೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಹಿಜಬ್ ತೆಗೆಯಲು ನಿರಾಕರಿಸಿ ಪೋಷಕರ ಜೊತೆ ಮನೆಗೆ ಹಿಂದಿರುಗಿದ್ದಾಳೆ.
ಬಾಗಲಕೋಟೆ ಜಿಲ್ಲೆ ಇಳಕಲ್ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಹಿಜಬ್ ಧರಿಸಿ ವಿದ್ಯಾರ್ಥಿನಿಯರು ಆಗಮಿಸಿದ್ದರು.
ಈ ವೇಳೆ ಅನೇಕ ಮಂದಿ ವಿದ್ಯಾರ್ಥಿನಿಯರು ಹಿಜಬ್ ತೆರೆದಿಟ್ಟು, ಪರೀಕ್ಷಾ ಕೇಂದ್ರದ ಒಳಗೆ ಪರೀಕ್ಷೆ ಬರೆಯಲು ಹೋದರು. ಆದರೆ ವಿದ್ಯಾರ್ಥಿನಿಯೊಬ್ಬಳು ಮಾತ್ರ ಬುರ್ಕಾ ತೆಗೆಯಲು ಒಪ್ಪಲಿಲ್ಲ. ಈ ವೇಳೆ ವಿದ್ಯಾರ್ಥಿನಿ ಮನವೊಲಿಸಲು ಶಿಕ್ಷಕರು ಪರೀಕ್ಷಾ ಸಿಬ್ಬಂದಿ ಯತ್ನಿಸಿದ್ದಾರೆ.
ಆದರೂ ಹಿಜಬ್ ತೆಗೆಯಲು ಒಪ್ಪದ ವಿದ್ಯಾರ್ಥಿನಿ ಕೊನೆಗೆ ಪರೀಕ್ಷೆ ಬರೆಯದೇ ಪೋಷಕರ ಜೊತೆ ಮನೆಗೆ ತೆರಳಿದ್ದಾಳೆ. ಇಂದು ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿನಿಯರು ಹಿಜಬ್ ತೆಗೆಯಲು ಎಲ್ಲಾ ಶಾಲೆಗಳಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆಗೊಳಿಸಲಾಗಿದೆ. ಶಾಲೆಯ ಸುತ್ತಮುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಗೊಳಿಸಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ