ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಮಧ್ಯೆ ಪರೀಕ್ಷೆ ಬೇಕೆನಿಸುವ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆಗಸ್ಟ್ 19 ರಿಂದ ಸೆಪ್ಟೆಂಬರ್ 3 ರವರೆಗೆ ನಡೆಯಲಿವೆ ಎಂದರು.
2239 ವಿದ್ಯಾರ್ಥಿಗಳು 600 ಕ್ಕೆ 600 ಅಂಕ :
ರಾಜ್ಯದ ಎಲ್ಲಾ 32 ಶೈಕ್ಷಣಿಕ ಜಿಲ್ಲೆಗಳ ಹಲವಾರು ಪದವಿ ಪೂರ್ವ ಕಾಲೇಜುಗಳ ಮಕ್ಕಳು 600ಕ್ಕೆ 600 ಅಂಕಗಳನ್ನು ಪಡೆದಿದ್ದಾರೆ. 2239 ಫ್ರೆಶ್ ವಿದ್ಯಾರ್ಥಿಗಳು ಪೂರ್ಣ ಅಂಕ ದಾಖಲಿಸಿದ್ದಾರೆ ಎಂದು ಸಚಿವರು ತಿಳಿಸಿದರು.
ಯಾವ ಜಿಲ್ಲೆಯಲ್ಲಿ ಎಷ್ಟು?:
ದಕ್ಷಿಣ ಕನ್ನಡ ಜಿಲ್ಲೆಯ 445, ಬೆಂಗಳೂರು ದಕ್ಷಿಣ-302, ಬೆಂಗಳೂರು ಉತ್ತರ-261, ಉಡುಪಿ-149, ಕೊಡಗು-04, ರಾಯಚೂರು/ಚಿಕ್ಕೋಡಿ-07, ಚಾಮರಾಜನಗರ-03, ಯಾದಗಿರಿ ಜಿಲ್ಲೆ-02 ಮಕ್ಕಳು ಪೂರ್ಣ ಅಂಕಗಳನ್ನು ಗಳಿಸಿದ್ದಾರೆ.
ಆಗಸ್ಟ್ ನಲ್ಲಿ ವಾರ್ಷಿಕ ಪರೀಕ್ಷೆ:
ಈ ಬಾರಿಯ ದ್ವಿತೀಯ ಪಿಯು ಫಲಿತಾಂಶವನ್ನು ಒಪ್ಪಿಕೊಳ್ಳಲು ಇಲ್ಲವೇ ತಿರಸ್ಕರಿಸಲು ಈ ಬಾರಿಯ ಪರೀಕ್ಷೆಗೆ ನೋಂದಾಯಿಸಿದ್ದ ಹೊಸ ಮತ್ತು ಪುನರಾವರ್ತಿ ಅಭ್ಯರ್ಥಿಗಳಿಗೆ ಅವಕಾಶವಿದೆ. ವಾರ್ಷಿಕ ಪರೀಕ್ಷೆಗೆ ಹಾಜರಾಗಲು ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಈ ಎರಡು ವರ್ಗದ ಅಭ್ಯರ್ಥಿಗಳು ಫಲಿತಾಂಶ ತಿರಸ್ಕರಿಸಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಜುಲೈ 30 ರಂದು ಕೊನೆ ದಿನವಾಗಿದೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment