Main News

ಎಲೆಕ್ಟ್ರಿಕ್​ ವಾಹನ ಖರೀದಿಸಿದರೆ ಕೇಂದ್ರದಿಂದ ಸಬ್ಸಿಡಿ – ಸಚಿವ ಗಡ್ಕರಿ

ದೇಶದಲ್ಲಿ ಎಲೆಕ್ಟ್ರಿಕ್​ ವಾಹನಗಳ ಬಳಕೆಗೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರ್ಕಾರ 62 ಸಾವಿರ ಎಲೆಕ್ಟ್ರಿಕ್​ ವಾಹನಗಳಿಗೆ ಸಬ್ಸಿಡಿ ನೀಡಲು ಮುಂದಾಗಿದೆ.

ದೇಶದಲ್ಲಿ ಎಲೆಕ್ಟ್ರಿಕ್​ ಚಾರ್ಜಿಂಗ್​ ಸೌಕರ್ಯಕ್ಕೂ ವ್ಯವಸ್ಥೆ ಮಾಡಲಾಗುತ್ತಿದೆ. ಈ ಎಲ್ಲಾ ಯೋಜನೆಗಾಗಿ ಕೇಂದ್ರ 10 ಸಾವಿರ ಕೋಟಿ ರುಗಳನ್ನು ಮೀಸಲಿಟ್ಟಿದೆ.

ಸಾರ್ವಜನಿಕ ಹಾಗೂ ವೈಯಕ್ತಿಕ ಬಳಕೆಗೆ ಎಲೆಕ್ಟ್ರಿಕ್​ ವಾಹನಗಳ ಬಳಕೆಗೆ ಕೇಂದ್ರ ಸರ್ಕಾರ ಉತ್ತೇಜನ ನೀಡುತ್ತಿದೆ. ಹೀಗಾಗಿ 7000 ಇ ಬಸ್, 5 ಲಕ್ಷ ತ್ರಿಚಕ್ರ ವಾಹನ, 55 ಸಾವಿರ ಇ ನಾಲ್ಕು ಚಕ್ರದ ವಾಹನಗಳು ಹಾಗೂ 10 ಲಕ್ಷ ಇ ಮೊಟಾರ್ ಸೈಕಲ್​​ಗಳಿಗೆ ಸಬ್ಸಿಡಿ ನೀಡುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಎಲೆಕ್ಟ್ರಿಕ್​ ವಾಹನ ಬಳಕೆದಾರರಿಗೆ ಚಾರ್ಜ್​ ಮಾಡುವ ಆತಂಕವನ್ನು ದೂರ ಮಾಡುವ ಸಲುವಾಗಿ ಹೆಚ್ಚು ಹೆಚ್ಚು ಚಾರ್ಜಿಂಗ್​ ವ್ಯವಸ್ಥೆಯನ್ನು ಮಾಡೋದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಎಲೆಕ್ಟ್ರಿಕ್​ ವಾಹನಗಳ ಮೇಲಿನ ಜಿಎಸ್​ಟಿ ಶೇಕಡಾ 5 ರಷ್ಟಿದೆ. ಈ ವಾಹನಗಳ ಮೇಲಿನ ತೆರಿಗೆಯನ್ನು ಮತ್ತಷ್ಟು ಕಡಿಮೆ ಮಾಡುವ ಪ್ರಸ್ತಾಪ ಸಧ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದೂ ಗಡ್ಕರಿ ಮಾಹಿತಿ ನೀಡಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024