ತುಮಕೂರಿನ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಸ್ವಾಮಿಗಳಿಗೆ ಭಾನುವಾರ ಶ್ರೀಮಠದಲ್ಲಿ ಜಂಗಮಪಟ್ಟಾಧಿಕಾರ ಮಹೋತ್ಸವ ಜರುಗಿತು.
ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಸ್ವಾಮಿಗಳಿಗೆ ಶ್ರೀ ಶಿವಸಿದ್ದೇಶ್ವರ ಎಂಬ ಯೋಗ ಪಟ್ಟ ನೀಡಲಾಗಿದೆ.
ಸಿದ್ಧಗಂಗೆಯ ಪೀಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳು, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಸೇರಿದಂತೆ ಹಲವು ಮಠಾಧ್ಯಕ್ಷರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಬಸವಜಯಂತಿ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠದಲ್ಲಿ ಪಟ್ಟಾಭಿಷೇಕ ಕಾರ್ಯಕ್ರಮ ನಡೆಸಲಾಗಿದೆ.
ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠ ಹಾಗೂ ದೇವನಹಳ್ಳಿ ಬಸವಕಲ್ಯಾಣ ಮಠದ ಉತ್ತರಾಧಿಕಾರಿಗಳಿಗೂ ಸಭಾ ಕಾರ್ಯಕ್ರಮದಲ್ಲಿ ಅಭಿದಾನವನ್ನು ಘೋಷಣೆ ಮಾಡಲಾಗಿದೆ.
ಬಂಡೆ ಮಠದ ಉತ್ತರಾಧಿಕಾರಿಗಳಿಗೆ ಶ್ರೀ ಮಹಾಲಿಂಗ ಸ್ವಾಮೀಜಿ, ದೇವನಹಳ್ಳಿಯ ಬಸವಕಲ್ಯಾಣ ಮಠದ ಉತ್ತರಾಧಿಕಾರಿಗಳಿಗೆ ಸದಾಶಿವ ಸ್ವಾಮೀಜಿ ಎಂಬ ಅಭಿದಾನ ನೀಡಲಾಗಿದೆ.ಇದನ್ನು ಓದಿ –ಇಬ್ಬರು ‘ಐಪಿಎಸ್ ‘ ಅಧಿಕಾರಿಗಳ ವರ್ಗಾವಣೆ
ಸಿದ್ಧಗಂಗೆಯ ಶ್ರೀ ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಿರಾಭಾರಿ ನಿರಂಜನ ಜಂಗಮಪಟ್ಟಾಧಿಕಾರ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ