ಮಂಡ್ಯ : ಪ್ರಸಕ್ತ ಸಾಲಿನ ಹಂಗಾಮಿನಲ್ಲಿ ಪ್ರತಿದಿನ 3 ಸಾವಿರ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಸಕ್ಕರೆ ಸಚಿವ ಶಿವಾನಂದ ಎಸ್ ಪಾಟೀಲ್ ಗುರುವಾರ ತಿಳಿಸಿದರು.
ಮೈಶುಗರ್ ಕಾರ್ಖಾನೆಯ 2023-24 ನೇ ಸಾಲಿನ ಹಂಗಾಮಿನ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯ ಕೆಲವು ದಿನ ಟರ್ಬೈನ್ ಸಮಸ್ಯೆಯಿಂದ ತಡವಾಗಿದೆ. ಇಂದು ನಾಳೆ 1500 ರಿಂದ 2000 ಟನ್ ಕಬ್ಬು ನುರಿಸಲಾಗುವುದು.ಕಾಲಕ್ರಮಮೂರು ಸಾವಿರ ಟನ್ ನಿಂದ ಐದು ಸಾವಿರ ಟನ್ ವರೆಗೂ ಕಬ್ಬು ನುರಿಯುವ ಕೆಲಸ ನಡೆಯಲಿದೆ ಎಂದರು.
ರೈತರಿಗೆ ಎಫ್ ಆರ್ ಪಿ ಪ್ರಕಾರ ದರ ನೀಡಿ ಕಬ್ಬು ಖರೀದಿಸಲಾಗುವುದು. ಕಳೆದ ಬಾರಿ ಕಡಿಮೆ ರಿಕವರಿ ಇದ್ದರೂ ರೈತರಿಗೆ 2800 ರೂ ನೀಡಲಾಗಿದೆ ಎಂದರು.
ಪ್ರಸಕ್ತ ಹಂಗಾಮಿನಲ್ಲಿ 3 ಲಕ್ಷ ಟನ್ ಕಬ್ಬು ನುರಿಸುವ ಗುರಿ ಇದೆ. ರೈತರು ಕಾರ್ಖಾನೆಗೆ ಕಬ್ಬು ಸರಬರಾಜು ಮಾಡುವಂತೆ ಮನವಿ ಮಾಡಿದರು.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮಾತನಾಡಿ ಸರ್ಕಾರದ ಬೆಂಬಲದಿಂದ ಕಾರ್ಖಾನೆ ಪ್ರಾರಂಭವಾಗಿದೆ. ಕಬ್ಬು ಅರೆಯುವ ಕಾರ್ಯ ಹೆಚ್ಚು ನಡೆಯುತ್ತದೆ. ಮುಂದಿನ ದಿನಗಳಲ್ಲಿ ಕಾರ್ಖಾನೆ ಉನ್ನತ ಮಟ್ಟದಲ್ಲಿ ನಡೆಯಲಿದೆ ಎಂದರು.
ಸಂಸದೆ ಸುಮಲತಾ ಅಂಬರೀಶ್ ಅವರು ಮಾತನಾಡಿ ಕಬ್ಬು ಅರೆಯುವಿಕೆ ಪ್ರಾರಂಭವಾಗಿರುವುದಕ್ಕೆ ನನ್ನ ಸ್ವಾಗತವಿದೆ ಎಂದರು.
ಮೈಶುಗರ್ ನಲ್ಲಿ ಕೆಲವು ಸಮಸ್ಯೆ ಮತ್ತು ಗೊಂದಲವಿದೆ. ಅವುಗಳನ್ನ ಸರಿಪಡಿಸಿಕೊಂಡು ಹೋದ್ರೆ ಮುಂದೆ ಯಾವುದೇ ಸಮಸ್ಯೆ ಬರಲ್ಲ. 40 ಕೋಟಿ ಕರೆಂಟ್ ಬಿಲ್ ಬಾಕಿಯ ಬಗ್ಗೆ ಕೇಂದ್ರದ ಇಂಧನ ಸಚಿವರಿಗೆ ಪತ್ರ ಬರೆದು ಮನ್ನ ಮಾಡುವಂತೆ ಮನವಿ ಮಾಡುತ್ತೇನೆ ಎಂದರು.ವಿಧಾನಸಭೆ ನೂತನ ಉಪಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಆಯ್ಕೆ
ಇದೇ ಸಂದರ್ಭದಲ್ಲಿ ಶಾಸಕರಾದ ಗಣಿಗ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್, ಕಾರ್ಖಾನೆ ತಾಂತ್ರಿಕ ವ್ಯವಸ್ಥಾಪಕ ನಿರ್ದೇಶಕ ಪಾಟೀಲ್ ಅಪ್ಪಸಾಹೇಬ್ ಸೇರಿದಂತೆ ರೈತ ನಾಯಕರು ಭಾಗಿಯಾಗಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು