January 29, 2026

Newsnap Kannada

The World at your finger tips!

crime,murder,women

ಹೆಂಡತಿಯ ಮುಖ ನೋಡಿದ ಆರೋಪಿ, ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ

Spread the love

ಹೆಂಡತಿ ಮುಖ ನೋಡಿ ಮುಜುಗರಕ್ಕೊಳಗಾದ ಆರೋಪಿ, ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ.

ಸಿದ್ದಲಿಂಗ ಸ್ವಾಮಿ ಮೃತ ದುರ್ದೈವಿ. ಈತ
ಬಿಡಿಎ ನಕಲಿ ಸೀಲ್, ಲೆಟರ್ ಹೆಡ್ ಬಳಸಿ ₹16 ಲಕ್ಷ ರು ವಂಚಿಸಿದ್ದ ಆರೋಪದ ಮೇಲೆ ಸಿದ್ದಲಿಂಗ ಸ್ವಾಮಿ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ವೇಳೆ ವಿದ್ಯಾರಣ್ಯಪುರದ ಮನೆಯಲ್ಲಿ ಕೆಲ ವಸ್ತುಗಳನ್ನು ಇಟ್ಟಿರುವುದಾಗಿ ಆರೋಪಿ ಪೊಲೀಸರ ಬಳಿ ಹೇಳಿದ್ದಾರೆ.

ಈ ಹಿನ್ನೆಲೆ ಸ್ಥಳ ಮಹಜರಿಗೆ ಕರೆದೊಯ್ದಾಗ, ಹೆಂಡತಿ ಮುಖ ನೋಡಿದನು. ಇದರಿಂದಾಗಿ ಆತನಿಗೆ ಅಪರಾಧಿ ಮನೋಭಾವ, ಮುಜುಗರಕ್ಕೊಳಗಾದ ಹಿನ್ನೆಲೆ ಆರೋಪಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದನು.‌

ಈ ಘಟನೆಯಲ್ಲಿ ಸಿದ್ದಲಿಂಗಸ್ವಾಮಿಗೆ ತೀವ್ರ ರಕ್ತಸ್ರಾವವಾಯಿತು. ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದನು ಎಂದು ಪೋಲಿಸರು ತಿಳಿಸಿದ್ದಾರೆ.

error: Content is protected !!