ಹೆಂಡತಿ ಮುಖ ನೋಡಿ ಮುಜುಗರಕ್ಕೊಳಗಾದ ಆರೋಪಿ, ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ.
ಸಿದ್ದಲಿಂಗ ಸ್ವಾಮಿ ಮೃತ ದುರ್ದೈವಿ. ಈತ
ಬಿಡಿಎ ನಕಲಿ ಸೀಲ್, ಲೆಟರ್ ಹೆಡ್ ಬಳಸಿ ₹16 ಲಕ್ಷ ರು ವಂಚಿಸಿದ್ದ ಆರೋಪದ ಮೇಲೆ ಸಿದ್ದಲಿಂಗ ಸ್ವಾಮಿ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ವೇಳೆ ವಿದ್ಯಾರಣ್ಯಪುರದ ಮನೆಯಲ್ಲಿ ಕೆಲ ವಸ್ತುಗಳನ್ನು ಇಟ್ಟಿರುವುದಾಗಿ ಆರೋಪಿ ಪೊಲೀಸರ ಬಳಿ ಹೇಳಿದ್ದಾರೆ.
ಈ ಹಿನ್ನೆಲೆ ಸ್ಥಳ ಮಹಜರಿಗೆ ಕರೆದೊಯ್ದಾಗ, ಹೆಂಡತಿ ಮುಖ ನೋಡಿದನು. ಇದರಿಂದಾಗಿ ಆತನಿಗೆ ಅಪರಾಧಿ ಮನೋಭಾವ, ಮುಜುಗರಕ್ಕೊಳಗಾದ ಹಿನ್ನೆಲೆ ಆರೋಪಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದನು.
ಈ ಘಟನೆಯಲ್ಲಿ ಸಿದ್ದಲಿಂಗಸ್ವಾಮಿಗೆ ತೀವ್ರ ರಕ್ತಸ್ರಾವವಾಯಿತು. ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದನು ಎಂದು ಪೋಲಿಸರು ತಿಳಿಸಿದ್ದಾರೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ