ವಿವಾಹಿತ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ತಾಲೂಕಿನ ಗ್ರಾಮ ದಾಸೇಗೌಡನಪಾಳ್ಯದಲ್ಲಿ ನಡೆದಿದೆ.
ಶ್ರೀನಿವಾಸ್(35), ಪುಷ್ಪಲತಾ(32) ಮೃತ ದುರ್ದೈವಿಗಳು.
ಮೃತರಿಬ್ಬರಿಗೂ ಬೇರೆ ಬೇರೆ ಮದುವೆಯಾಗಿತ್ತು. ಆ ಬಳಿಕ ಕೆಲ ಸಮಯ ದೂರವಾಗಿದ್ದರು. ಆದರೆ ಇತ್ತೀಚೆಗೆ ಇಬ್ಬರು ಸಹ ಒಟ್ಟಿಗೆ ವಾಸ ಮಾಡಲು ಆರಂಭಿಸಿದ್ದರು ಎನ್ನಲಾಗಿದೆ.
ನಿನ್ನೆ ಇಬ್ಬರ ನಡುವೆ ಮಾತುಕತೆ ನಡೆದಿದೆ ಈ ವೇಳೆ ಸಮಾಧಾನಗೊಂಡಿದ್ದ ಪುಷ್ಪಲತಾ ಮೊದಲು ನೇಣಿಗೆ ಶರಣಾಗಿದ್ದಳಂತೆ.
ಆ ಬಳಿಕ ಆಕೆಯ ಮೃತದೇಹವನ್ನು ಕಂಡ ಶ್ರೀನಿವಾಸ್ ಆಕೆಯ ಮೃತದೇಹ ಕೆಳಗೆ ಇಳಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಕುದೂರು ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್