ಕಿರುತೆರೆ ನಟಿ ಸೌಜನ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ

Team Newsnap
1 Min Read

ಕಿರುತೆರೆ ಧಾರಾವಾಹಿ ಹಾಗೂ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ನಟಿ ಸೌಜನ್ಯ (25) ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ದೊಡ್ಡಬೆಲೆಯಲ್ಲಿ ನಡೆದಿದೆ.

ಕುಂಬಳಗೋಡು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 4 ಪುಟಗಳ ಡೆತ್​ನೋಟ್​​ ಬರೆದಿಟ್ಟು ಅಪಾರ್ಟ್​​ಮೆಂಟ್​​ನಲ್ಲಿ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌

ದೊಡ್ಡ ಬೆಲೆ ಗ್ರಾಮದ ಸನ್​ ವರ್ಥ್​​ ಅಪಾರ್ಟ್​​ಮೆಂಟ್​ನಲ್ಲಿ ನಟಿ ಸೌಜನ್ಯ ವಾಸಿಸುತ್ತಿ ದ್ದರು.

ಇಂದು ಬೆಳಗ್ಗೆ ತನ್ನ ಗೆಳೆಯನೊಂದಿಗೆ ಊಟ ತರಲು ಹೇಳಿ ಮನೆಯಿಂದ ಹೊರಗೆ ಕಳುಹಿಸಿ, ಆತ ಮನೆಗೆ ವಾಪಸ್ ಬರೋ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದರಂತೆ.

ಅಪಾರ್ಟ್​​ಮೆಂಟ್​ಗೆ ಸೌಜನ್ಯ ಗೆಳೆಯ ವಾಪಸ್​ ಬಂದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ.

ನಟಿಯ ಶವದ ಬಳಿ ಪತ್ತೆಯಾಗಿದೆ. 4 ಪುಟಗಳ ಈ ಪತ್ರದಲ್ಲಿ ನನಗೆ ಸಾಕಷ್ಟು ಆರೋಗ್ಯ ಸಮಸ್ಯೆ ಇದೆ. ಆದರೆ ಯಾರಿಗೂ ಹೇಳಿಕೊಳ್ಳಲು ಆಗುತ್ತಿಲ್ಲ. ಸಾಕಷ್ಟು ಬಾರೀ ಚಿಕಿತ್ಸೆ ಪಡೆದುಕೊಂಡರು ಆಗುತ್ತಿಲ್ಲ. ಆದ್ದರಿಂದಲೇ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ. ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನನ್ನು ಕ್ಷಮಿಸಿ ಬಿಡಿ ಎಂದು ಪತ್ರದಲ್ಲಿ ತಂದೆ-ತಾಯಿ ಬಳಿ ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ.

ಕೊಡಗಿನ ಕುಶಾಲನಗರದ ಸೌಜನ್ಯ ಅವರು ತಮ್ಮ ಗೆಳೆಯನೊಂದಿಗೆ ಕಳೆದ ಕೆಲ ತಿಂಗಳಿನಿಂದ ಅಪಾರ್ಟ್​​ಮೆಂಟ್​​​ನಲ್ಲಿ ವಾಸಿಸುತ್ತಿದ್ದರು. ಕನ್ನಡದ ಹಲವು ಧಾರಾವಾಹಿ ಹಾಗೂ ಚೌಕಟ್ಟು ಮತ್ತೆ ಫನ್​​ ಸಿನಿಮಾಗಳಲ್ಲಿ ನಟಿಸಿದ್ದರು.

Share This Article
Leave a comment