crime

ಕಿರುತೆರೆ ನಟಿ ಸೌಜನ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಿರುತೆರೆ ಧಾರಾವಾಹಿ ಹಾಗೂ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ನಟಿ ಸೌಜನ್ಯ (25) ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ದೊಡ್ಡಬೆಲೆಯಲ್ಲಿ ನಡೆದಿದೆ.

ಕುಂಬಳಗೋಡು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 4 ಪುಟಗಳ ಡೆತ್​ನೋಟ್​​ ಬರೆದಿಟ್ಟು ಅಪಾರ್ಟ್​​ಮೆಂಟ್​​ನಲ್ಲಿ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌

ದೊಡ್ಡ ಬೆಲೆ ಗ್ರಾಮದ ಸನ್​ ವರ್ಥ್​​ ಅಪಾರ್ಟ್​​ಮೆಂಟ್​ನಲ್ಲಿ ನಟಿ ಸೌಜನ್ಯ ವಾಸಿಸುತ್ತಿ ದ್ದರು.

ಇಂದು ಬೆಳಗ್ಗೆ ತನ್ನ ಗೆಳೆಯನೊಂದಿಗೆ ಊಟ ತರಲು ಹೇಳಿ ಮನೆಯಿಂದ ಹೊರಗೆ ಕಳುಹಿಸಿ, ಆತ ಮನೆಗೆ ವಾಪಸ್ ಬರೋ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದರಂತೆ.

ಅಪಾರ್ಟ್​​ಮೆಂಟ್​ಗೆ ಸೌಜನ್ಯ ಗೆಳೆಯ ವಾಪಸ್​ ಬಂದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ.

ನಟಿಯ ಶವದ ಬಳಿ ಪತ್ತೆಯಾಗಿದೆ. 4 ಪುಟಗಳ ಈ ಪತ್ರದಲ್ಲಿ ನನಗೆ ಸಾಕಷ್ಟು ಆರೋಗ್ಯ ಸಮಸ್ಯೆ ಇದೆ. ಆದರೆ ಯಾರಿಗೂ ಹೇಳಿಕೊಳ್ಳಲು ಆಗುತ್ತಿಲ್ಲ. ಸಾಕಷ್ಟು ಬಾರೀ ಚಿಕಿತ್ಸೆ ಪಡೆದುಕೊಂಡರು ಆಗುತ್ತಿಲ್ಲ. ಆದ್ದರಿಂದಲೇ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ. ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನನ್ನು ಕ್ಷಮಿಸಿ ಬಿಡಿ ಎಂದು ಪತ್ರದಲ್ಲಿ ತಂದೆ-ತಾಯಿ ಬಳಿ ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ.

ಕೊಡಗಿನ ಕುಶಾಲನಗರದ ಸೌಜನ್ಯ ಅವರು ತಮ್ಮ ಗೆಳೆಯನೊಂದಿಗೆ ಕಳೆದ ಕೆಲ ತಿಂಗಳಿನಿಂದ ಅಪಾರ್ಟ್​​ಮೆಂಟ್​​​ನಲ್ಲಿ ವಾಸಿಸುತ್ತಿದ್ದರು. ಕನ್ನಡದ ಹಲವು ಧಾರಾವಾಹಿ ಹಾಗೂ ಚೌಕಟ್ಟು ಮತ್ತೆ ಫನ್​​ ಸಿನಿಮಾಗಳಲ್ಲಿ ನಟಿಸಿದ್ದರು.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024