ಕೆ ಆರ್ ಎಸ್ ಸುತ್ತ ಗಣಿಗಾರಿಕೆ : ತನಿಖೆಗೆ ಕೇಂದ್ರ ಗೃಹ ಸಚಿವರಿಗೂ ಮನವಿ ಮಾಡಿದ ಸುಮಲತಾ

Team Newsnap
0 Min Read

ಮಂಡ್ಯದ ಕೆಆರ್‌ಎಸ್‌ ಅಣೆಕಟ್ಟೆಯ ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೂ ಶುಕ್ರವಾರ ದೆಹಲಿಯಲ್ಲಿ ಮನವಿ ಸಲ್ಲಿಸಿದರು.

ಈ ಪತ್ರದಲ್ಲಿ ಕೆಆರ್‌ಎಸ್‌ ಅಣೆಕಟ್ಟೆಯ ಸುತ್ತಮುತ್ತಲ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೆ ಅತಿರೇಕವಾಗಿ ನಡೆಯುತ್ತಿದೆ. ಇದರಿಂದ ಕೆಆರ್‌ಎಸ್‌ ಅಣೆಕಟ್ಟೆಗೆ ಅಪಾಯ ಎದುರಾಗಿದೆ. ಹೀಗಾಗಿ ಮುಂದೆ ಸಂಭವಿಸಬಹುದಾದ ಅಪಾಯ ಕುರಿತು ವಾಸ್ತವಾಂಶವನ್ನು ತರಲಾಗಿದೆ ಎಂದಿದ್ದಾರೆ.

ಅಕ್ರಮ ಗಣಿಗಾರಿಕೆ ಬಗ್ಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

Share This Article
Leave a comment