Trending

ಸಂಸದೆ ಸುಮಲತಾ ಬೆಂಬಲ ಬಿಜೆಪಿ – ಕಾಂಗ್ರೆಸ್ಸಿಗೋ ? ತಟಸ್ಥ ನಿಲುವೋ ? ಈಗ ಚರ್ಚೆಯ ವಸ್ತು

ರಂಗೇರಿದ ಮಂಡ್ಯ ಎಂಎಲ್​​​ಸಿ ಚುನಾವಣೆಯಲ್ಲಿ ಸಂಸದೆ ಸುಮಲತಾ ಬೆಂಬಲ ಯಾರಿಗೆ ಸಿಗಲಿದೆ ಎಂಬುದೇ ಚರ್ಚೆ ವಿಷಯವಾಗಿದೆ.

ಜಿಲ್ಲೆಯಲ್ಲಿ ಜೆಡಿಎಸ್ ಗೆ ಮಾತ್ರ ಸುಮಲತಾ ಬೆಂಬಲ ಸಿಗುವುದಿಲ್ಲ ಎಂಬುದು ತೆರೆದಿಟ್ಟ ಸತ್ಯ.

ಬಿಜೆಪಿ- ಕಾಂಗ್ರೆಸ್ ಅಭ್ಯಥಿ೯ಗಳು ಹಾಗೂ ಆಯಾ ಪಕ್ಷಗಳು ಸುಮಲತಾರ ಬೆಂಬಲಕ್ಕೆ ಕಾದು ಕುಳಿತಿವೆ.

ವಿಧಾನ ಪರಿಷತ್​ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಅಂತಿಮ ದಿನವಾದ ಇಂದು ಮೂರು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಈಗ ಚುನಾವಣಾ ಕಣ ರಂಗೇರಿದೆ, ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ನಾಯಕರು ಸಿದ್ಧತೆ ನಡೆಸಿದ್ದಾರೆ. ಈ ನಡುವೆ ಮಂಡ್ಯ ಸಂಸದೆ ಸುಮಲತಾ ಅವರು ಯಾರಿಗೆ ಬೆಂಬಲ ನೀಡಲಿದ್ದಾರೆ ಎಂಬ ಚರ್ಚೆ ವಸ್ತುವಾಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡಿತ್ತು. ಅಲ್ಲದೇ ಮೈಸೂರಿನಲ್ಲಿ ನಡೆದ ಪ್ರಚಾರದ ಸಮಾವೇಶದಲ್ಲಿ ಸುಮಲತಾ ಗೆಲ್ಲಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಮನವಿ ಮಾಡಿದ್ದರು.

ಅತ್ತ ಕಾಂಗ್ರೆಸ್ -ಜೆಡಿಎಸ್ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರ್ ಸ್ವಾಮಿ ಬದಲು ಸುಮಲತಾರನ್ನು ಬಹುತೇಕ ಕಾಂಗ್ರೆಸ್​ ನಾಯಕರು ಬೆಂಬಲ ಸೂಚಿಸಿದ್ದರು.

ನೇರವಾಗಿ ಬೆಂಬಲ ಸೂಚಿಸದಿದ್ದರೂ ಕೂಡ ಸುಮಲತಾ ಗೆಲುವಿಗೆ ತಂತ್ರ ಎಣೆದಿದ್ದ ಕಾಂಗ್ರೆಸ್​ ನಾಯಕರು ಗೆಲುವಿಗೆ ಶ್ರಮಿಸಿದ್ರು. ಈ ಹಿನ್ನೆಲೆಯಲ್ಲಿ ಸದ್ಯ ಸುಮಲತಾ ಅವರು ಇಕ್ಕಟ್ಟಿ ಗೆ ಸಿಲುಕಿದ್ದು, ಬಿಜೆಪಿಗೆ ಬೆಂಬಲ ಕೊಡೋದಾ, ಕಾಂಗ್ರೆಸ್​ಗೆ ಬೆಂಬಲ ಕೊಡೋದಾ ಎಂಬ ಚಿಂತನೆಯಲ್ಲಿದ್ದಾರೆ ಎನ್ನಲಾಗಿದೆ. ಈ ನಡುವೆ ಸುಮಲತಾ ಅವರ ಬಹುತೇಕ ಬೆಂಬಲಿಗರು ತಟಸ್ಥವಾಗಿರಲು ನಿರ್ಧರಿಸುವ ಸಾಧ್ಯತೆ ಇದೇ ಎಂದಿದ್ದಾರೆ.

ನಮಗೆ ಬೆಂಬಲ – ಬಿಜೆಪಿ ಅಭ್ಯರ್ಥಿ

ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ತಮಗೇ ಸುಮಲತಾ ಅವರು ಬೆಂಬಲ ನೀಡಬೇಕು. ಅವರನ್ನು ಭೇಟಿ ಮಾಡುತ್ತೇನೆ ಎಂದಿದ್ದಾರೆ.

ಸುಮಲತಾ ಅವರ ಚುನಾವಣೆಯಲ್ಲಿ ನಾವು ಅವರ ಪರ ಕೆಲಸ ಮಾಡಿದ್ದೀವಿ. ಅವರ ಗೆಲುವು ನಮ್ಮ ಗೆಲುವು ಅಂತ ಸಂಭ್ರಮಿಸಿದ್ದೇವೆ. ಸುಮಲತಾ ನಮಗೆ ಬೆಂಬಲ ನೀಡಲಿದ್ದಾರೆ. ಈಗಾಗಲೇ ದೂರವಾಣಿ ಮೂಲಕ ಮಾತನಾಡಿದ್ದೇವೆ. ಮುಂದೆ ಖುದ್ದಾಗಿ ಭೇಟಿ ಮಾಡಿ ಬೆಂಬಲ ಕೇಳುತ್ತೇನೆ. ಸುಮಲತಾ ಬೆಂಬಲ ನೀಡುವ ವಿಶ್ವಾಸ ಇದೆ ಎಂದರು.

ಇದೇ ವೇಳೆ ಬಿಜೆಪಿ ಋಣ ತೀರಿಸಲು ಸುಮಲತಾ ಅವರಿಗೆ ಒಳ್ಳೆಯ ಅವಕಾಶ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವಿಜಯಕುಮಾರ್ ಹೇಳಿದರು.

Team Newsnap
Leave a Comment
Share
Published by
Team Newsnap

Recent Posts

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024