ಕನ್ನಡಿಗರ ನೆಲ ಹಾಗೂ ಕನ್ನಡಿಗರಿಗೆ ಋಣಿಯಾಗಿ ಯಾವತ್ತೂ ಹೋರಾಟ ನಡೆಸುತ್ತೇನೆ’ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ‘ಅನಿವಾಸಿ ಭಾರತೀಯ ಕನ್ನಡಿಗರ ಸಂಘ’ದ ಜೂಮ್ ಮೀಟಿಂಗ್ನಲ್ಲಿ ಭರವಸೆ ನೀಡಿದರು.
ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ ಲಂಡನ್ನಲ್ಲಿ ನೆಲೆಸಿರುವ ಕನ್ನಡಿಗ ರಾಜೀವ ಮೇತ್ರಿ ಹಾಗೂ ಐರ್ಲೆಂಡ್ನ ಕನ್ನಡಿಗ ನಿವಾಸಿ ಈಶ್ವರ್ ಪ್ರಾರಂಭ ಮಾಡಿರುವ ‘ಅನಿವಾಸಿ ಭಾರತೀಯ ಕನ್ನಡಿಗರ ಸಂಘ’ ಪ್ರತಿ ವಾರ ಹಲವಾರು ಆನ್ಲೈನ್ ಕಾರ್ಯಕ್ರಮ ನಡೆಸಿಕೊಡುತ್ತಿದೆ. ಈ ವಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುಮಲತಾ ಅಂಬರೀಶ್ ಚಿತ್ರರಂಗದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಸುಮಾರು 90 ನಿಮಿಷಗಳ ಕಾಲ 25 ದೇಶಗಳಲ್ಲಿ ನೆಲೆಸಿರುವ ಕನ್ನಡಿಗರೊಂದಿಗೆ ಸಂವಾದ ಮಾಡಿದ ಸುಮಲತಾ ರಾಜಕೀಯ ಅಡೆತಡೆಗಳು, ಸಂಕಷ್ಟಗಳು, ಅವರು ತೊಂದರೆಯಲ್ಲಿದ್ದ ಸಮಯದಲ್ಲಿ ಕರ್ನಾಟಕದವರಲ್ಲದೇ ಹೊರ ರಾಜ್ಯ ಹಾಗೂ ಹೊರದೇಶದಲ್ಲಿನ ಕನ್ನಡಿಗರು ಅವರಿಗೆ ನೀಡಿದ ಪ್ರೋತ್ಸಾಹವನ್ನು ನೆನಪಿಸಿಕೊಂಡಿದ್ದಾರೆ.
ಇತ್ತೀಚಿಗೆ ಸಂಸತ್ತಿನಲ್ಲಿ ಕನ್ನಡ ಪರ ಧ್ವನಿ ಎತ್ತಿ ಸಮರ್ಥವಾಗಿ ಮಾತನಾಡಿದ್ದಕ್ಕಾಗಿ NRI ಕನ್ನಡ ಸಂಘದ ಸದಸ್ಯರು ಸುಮಲತಾ ಅಂಬರೀಷ್ ಅವರನ್ನು ಅಭಿನಂದಿಸಿದರು.
ಇಂಗ್ಲೆಂಡ್, ಅಮೇರಿಕ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ದುಬೈ, ಕತಾರ್, ಸೌದಿ ಅರೇಬಿಯಾ, ಓಮನ್, ಕುವೈತ್, ಆಫ್ರಿಕಾ, ಐರ್ಲೆಂಡ್ ಕೆನಡಾ, ಯುರೋಪ್ ಸೇರಿದಂತೆ ಸುಮಾರು 25 ದೇಶಗಳ ಕನ್ನಡ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರತಿ ಶನಿವಾರ ಹಾಗೂ ಭಾನುವಾರ ಇಂತಹ ಕಾರ್ಯಕ್ರಮ ನಡೆಯುತ್ತಿದ್ದು ಕನ್ನಡದ ಹೆಸರಾಂತ ಕವಿಗಳು, ನಗೆ ಹರಟೆಗಾರರು, ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂವಾದ ನಡೆಸುತ್ತಾರೆ. ಕಳೆದ ಒಂದು ತಿಂಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಗಣ್ಯರು ಹಾಗೂ ಸಾಧಕರು ಭಾಗವಹಿಸಿದ್ದಾರೆ.
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment