filmy

ಅಂಬರೀಶ್ ಜನ್ಮದಿನಕ್ಕೆ ಸುಮಲತಾ ಭಾವುಕ ಪತ್ರ

ರೆಬಲ್ ಸ್ಟಾರ್ ಅಂಬರೀಶ್ ಅವರ 71 ನೇ ವರ್ಷದ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿದ ಪತ್ನಿ, ನಟಿ, ಸಂಸದೆ ಸುಮಲತಾ ಅಂಬರೀಶ್ ಭಾವುಕ ಪತ್ರವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ. ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು. ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು. ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬವೂ ಆಗಿತ್ತು.

ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬವನ್ನೂ ಅಭಿಮಾನಿಗಳ ಜೊತೆಯಾಗಿ ಮತ್ತಷ್ಟು ಅದ್ಧೂರಿಯಾಗಿ ಆಚರಿಸುತ್ತಿದ್ದೆವು’ ಎಂದು ಬರೆದಿದ್ದಾರೆ.

ಹುಟ್ಟು ಹಬ್ಬದ ದಿನ ಮನೆ ಮುಂದೆ ಜನಸಾಗರ, ನಿಮ್ಮ ಆರ್ಭಟ, ಹಾಸ್ಯ ಪ್ರಜ್ಞೆಯ ಮಾತು, ರಾತ್ರಿ ಇಡೀ ಕಾಯುತ್ತಾ ನಿಂತಿದ್ದ ಅಭಿಮಾನಿಗಳ ಘೋಷಣೆ ಇನ್ನೂ ಹಾಗೆಯೇ ಇದೆ. ಇವತ್ತೂ ಕೂಡ ಅವೆಲ್ಲವೂ ನಿಮಗೆ ಶುಭಾಶಯ ಹೇಳುತ್ತಿವೆ. ಸ್ವೀಕರಿಸಿ.

ಹ್ಯಾಪಿ ಬರ್ತಡೇ ಮೈ ಅಂಬಿ. ಜತೆಗಿರದ ಜೀವ ಎಂದೆಂದಿಗೂ ಜೀವಂತ’ ಎಂದು ಸುಮಲತಾ ಪೋಸ್ಟ್ ಮಾಡಿದ್ದಾರೆ.

ಅಂಬರೀಶ್ ಸಿನಿಮಾ ರಂಗದ ಅಜಾತಶತ್ರು. ಹಿರಿ ಕಿರಿಯರ ಜೊತೆ ಒಳ್ಳೆಯ ಬಾಂಧವ್ಯವನ್ನು ಇಟ್ಟುಕೊಂಡಿದ್ದರು. ಸಿನಿಮಾ ರಂಗದಲ್ಲಿ ಏನೇ ಸಮಸ್ಯೆಯಾದರೂ ಅದನ್ನು ಬಗೆಹರಿಸುವ ತಾಕತ್ತು ಕೇವಲ ಅಂಬರೀಶ್ ಅವರಿಗೆ ಮಾತ್ರವಿತ್ತು. 5 ಗ್ಯಾರಂಟಿ `ಬ್ಲೂಪ್ರಿಂಟ್’ ಸಿದ್ದವಾಗುತಿದ್ದೆ: ಡಿಸಿಎಂ

ನೂರಾರು ಚಿತ್ರಗಳಲ್ಲಿ ನಟಿಸಿ, ಅನೇಕರ ಬದುಕಿಗೆ ಆಸರೆಯಾಗಿದ್ದರು. ಹಾಗಾಗಿ ಸಿನಿಮಾ ರಂಗ ಕೂಡ ಅಂಬಿ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿದೆ.

Team Newsnap
Leave a Comment

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024