ಹರ್ಷನ ಕೊಲೆಗೆ ಎರಡು ವರ್ಷಗಳ ಹಿಂದೆಯೇ ಸುಪಾರಿ ಕೊಟ್ಟಿದ್ದರು ಎಂದು ಮೃತನ ಸಂಬಂಧಿ ಗಂಭೀರ ಆರೋಪ ಮಾಡಿದ್ದಾರೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಬಳಿ ಹತ್ಯೆಯಾದ ಯುವಕನ ಸಂಬಂಧಿ ಪ್ರವೀಣ್ ಮಾತನಾಡಿ ಹಷ೯ನನ್ನು ಹೊಡೆದು ಹಾಕಿದ್ದಾರೆ ಅಷ್ಟೇ. ಇವನನ್ನು ಹೊಡೆದು ಹಾಕಿದರೆ 10 ಲಕ್ಷ ರೂ. ಕೊಡ್ತೀನಿ ಅಂತ 2 ವರ್ಷದಿಂದಲೂ ಮುಸ್ಲಿಮರು ಹೇಳುತ್ತಿದ್ದರು. ಯಾರು ಹೊಡೆದು ಹಾಕಿದ್ದಾರೆ ಅಂತ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಪೊಲೀಸರು ಏನು ತನಿಖೆ ಮಾಡುತ್ತಾರೋ ಅದರ ಆಧಾರದ ಮೇಲೆ ನಮಗೆ ಗೊತ್ತಾಗಬೇಕು. ಎರಡು ವರ್ಷದಿಂದಲೂ ಈ ಜಿದ್ದು ಇದ್ದೇ ಇದೆ ಎಂದು ಪ್ರವೀಣ್ ಮಾಹಿತಿ ನೀಡಿದ್ದಾನೆ.
ಹರ್ಷ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ ಎಂದರು.
ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣವಾಗಿ ಐದು ಮಂದಿ ಕೃತ್ಯ ಎಸಗಿದ್ದಾರೆ
ಈ ಪೈಕಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಯು ಶಿವಮೊಗ್ಗದ ಕ್ಲಾರ್ಕ್ ಪೇಟೆ ಮೂಲದ ಆರೋಪಿಯಾಗಿದ್ದಾನೆ. ದೊಡ್ಡಪೇಟೆ ಪೊಲೀಸರಿಂದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಆರೋಪಿಯು ಹಳೆಯ ವೈಷ್ಯಮದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದ್ದು, ಐದು ಮಂದಿ ಮಚ್ಚು ಲಾಂಗುಗಳಿಂದ ಹರ್ಷನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಉಳಿದ ನಾಲ್ವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
This website uses cookies.
Leave a Comment