February 23, 2026

Newsnap Kannada

The World at your finger tips!

parvathi47

ಕಾಯಿಲೆ ಗುಣಪಡಿಸುವ ನೆಪ : ಪೂಜಾರಿ ಕೊಟ್ಟ ಬೆತ್ತದ ಏಟಿಗೆ ಮಹಿಳೆ ಸಾವು

Spread the love

ಅನಾರೋಗ್ಯ ಪೀಡಿತ ಮಹಿಳೆಯನ್ನು ಗುಣಪಡಿಸುವ ನೆಪದಲ್ಲಿ ಪೂಜೆ ವೇಳೆ ಪೂಜಾರಿ ಬೆತ್ತದ ಏಟು ನೀಡಿದ ಪರಿಣಾಮ ಆ ಮಹಿಳೆ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ ಸಮೀಪದ ಗ್ರಾಮವೊಂದರಲ್ಲಿ ಜರುಗಿದೆ.

ಪಾರ್ವತಿ (47) ಮೃತಪಟ್ಟ ಮಹಿಳೆ. ಕಳೆದ ಕೆಲದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ. ಹೀಗಾಗಿ ದೇವರ ಮೊರೆ ಹೋಗಿದ್ದರು.

ನೀವು ಗುಣಮುಖರಾಗಲು ಪೂಜೆ ಮಾಡಿಸಬೇಕು ಎಂದು ಮಹಿಳೆಗೆ ಪೂಜಾರಿ ತಿಳಿಸಿದ್ದಾರೆ.

ಪೂಜೆ ಮಾಡಿ ತಲೆನೋವು ಗುಣಪಡಿಸುವುದಾಗಿ ಹೇಳಿ ಮಹಿಳೆ ತಲೆಗೆ ಪೂಜಾರಿ ಬೆತ್ತದಿಂದ ಹೊಡೆದಿದ್ದಾರೆ.

ಹಿರಿಯಾಪಟ್ಟಣದಮ್ಮ ದೇವರ ಪೂಜಾರಿಯು ಬೆತ್ತದಿಂದ ತಲೆಗೆ ಹೊಡೆದ ಪರಿಣಾಮ ಮಹಿಳೆ ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡ ಆಕೆ ಚಿಕಿತ್ಸೆ ಫಲಕಾರಿಯಾಗದೇ ಹಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಪೂಜಾರಿ ನಾಪತ್ತೆಯಾಗಿದ್ದಾನೆ ಶ್ರವಣಬೆಳಗೊಳ ಪೋಲಿಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ.

error: Content is protected !!