Karnataka

ಸಂಸದೆ ಸುಮಲತಾ ಬೆಂಬಲಿಗರೇ ಹೆದ್ದಾರಿ ದಲ್ಲಾಳಿಗಳು: ರವೀಂದ್ರ ಶ್ರೀಕಂಠಯ್ಯ

ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಭೂಸ್ವಾಧೀನದಲ್ಲಿ ಸಿಇಓ ಕಚೇರಿಯಲ್ಲಿ ಸಭೆ ಮಾಡುವ ರಾಜಕಾರಣಿಯ ಆಪ್ತರೇ ದಲ್ಲಾಳಿಗಳಾಗಿ ಅವ್ಯವಹಾರ ಮಾಡಿದ್ದಾರೆಂದು ಸಂಸದೆ ಸುಮಲತಾ ಅಂಬರೀಶ್ ಹೆಸರು ಹೇಳದೇ ಮಂಗಳವಾರ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪಿಸಿದರು.

ಮಂಡ್ಯ ತಾಲ್ಲೂಕಿನ ಇಂಡುವಾಳು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರವೀಂದ್ರ ಜನರ ಬಳಿ ಹೋಗದೆ ಕಚೇರಿಯಲ್ಲಿ ಕೂತು ಹೋಗುತ್ತಿರುವ ರಾಜಕಾರಣಿ ಹಾಗೂ ಕೇಂದ್ರ ಮಂತ್ರಿಗಳಿಗೆ ಅರ್ಜಿ ಕೊಟ್ಟು ಪೋಟೋ ತೆಗೆಸಿಕೊಂಡು ಜನರಿಗೆ ಮೋಸ ಮಾಡುತ್ತಿರುವ ರಾಜಕಾರಣಿಯ ಶಿಷ್ಯಂದಿರೇ ಹೆದ್ದಾರಿ ಭೂಸ್ವಾಧೀನದಲ್ಲಿ ದಲ್ಲಾಳಿಗಳಾಗಿ ನೂರಾರು ಕೋಟಿ‌ ಅವ್ಯವಹಾರ ನಡೆಸಿದ್ದಾರೆ ಎಂದು ದೂರಿದರು.ಇದನ್ನು ಓದಿ -ಬಿಜೆಪಿ ಸರ್ಕಾರವನ್ನು ಯಾರೂ ಪ್ರಶ್ನೆ ಮಾಡುವ ಹಾಗಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ನಾನು ಹಳ್ಳಿಗಳ ಉದ್ಧಾರ ಮಾಡ್ತೀನಿ ಎಂದು ಹೇಳ್ತಾ ಸಿಇಓ ಕಚೇರಿಯಲ್ಲಿ ಮೀಟಿಂಗ್ ಮಾಡಿ ಹೋಗುವ ಆ ರಾಜಕಾರಣಿಯ ಆಪ್ತ 7 ಜನ ದಲ್ಲಾಳಿಗಳು ಹೆದ್ದಾರಿ ಅಕ್ರಮದಲ್ಲಿ ಭಾಗಿಯಾಗಿ ರೈತರಿಗೆ ಪರಿಹಾರ ಹಣದಲ್ಲಿ ಮೋಸ ಮಾಡಿದ್ದಾರೆ.ಅವರು ರೈತರ ಜೊತೆ ಮಾತನಾಡಿರುವ ಆಡಿಯೋ ನಮ್ಮ ಬಳಿ ಇದೆ ಎಂದು ಕಿಡಿಕಾರಿದರು.

ಆ ರಾಜಕಾರಣಿ ಇಲ್ಲಿವರೆಗೂ ಜಿಲ್ಲೆಗೆ ಯಾವುದೇ ಒಳ್ಳೆಯ ಕೆಲಸ ಮಾಡಿಲ್ಲ.ಪ್ರವಾಸೋದ್ಯಮಕ್ಕೆ ವಿಶ್ವದಲ್ಲಿ ಹೆಸರುವಾಸಿಯಾದ ಶ್ರೀರಂಗಪಟ್ಟಣದಲ್ಲಿ ಟಿಪ್ಪು ಎಕ್ಸ್ ಪ್ರೆಸ್ ರೈಲು ನಿಲ್ಲಿಸುವ ಕೆಲಸ ಮಾಡಿಸಲು ಇವರಿಗೆ ಆಗಲಿಲ್ಲ.ಅವರ ಪಟಾಲಂ ಜಿಲ್ಲೆಯಲ್ಲಿ ಎಲ್ಲಿ ಕ್ವಾರೆ ನಡೀತಿದೆ ಎಂದು ನೋಡಿ ಬರೋ ಕೆಲಸ ಮಾಡ್ತಿದ್ದಾರೆ.


ಇವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ವಸ್ತುಗಳು ಸಿಗದೆ ಜಿಲ್ಲೆಯ ಅಭಿವೃದ್ಧಿ ಆಗ್ತಿಲ್ಲ.ಅಧಿಕಾರಿಗಳಿಗೆ ಹೆದರಿಸುತ್ತ ದಲ್ಲಾಳಿ ಕೆಲಸ ಮಾಡ್ತಿದ್ದಾರೆ‌.ಇವರಿಗೆ ಸ್ವಲ್ಪನಾದ್ರೂ ಏನಾದರೂ ಮರ್ಯಾದೆ ಇದ್ರೆ ಇದನ್ನ ನಿಲ್ಲಿಸಬೇಕು ಎಂದರು.

ಮೇಲುಕೋಟೆಯಲ್ಲಿ ಸುಮಲತಾ ಆಣೆ, ಪ್ರಮಾಣಕ್ಕೆ ಜೆಡಿಎಸ್ ಶಾಸಕರನ್ನು ಆಹ್ವಾನಿಸಿದ್ದ ವಿಚಾರಕ್ಕೆ ಗರಂ ಆದ ರವೀಂದ್ರ ಶ್ರೀಕಂಠಯ್ಯ, ಏಟ್ರಿಯಾ ಹೋಟೆಲ್ ನಲ್ಲಿ ವ್ಯಾಪಾರ ಮಾಡಲು ಯಾರು ಹೋಗಿ ಕುಳಿತಿದ್ರು?
ಏನಕ್ಕೆ ಕಳಿಸಿದ್ರು ಅವರ ಬೆಂಬಲಿಗರನ್ನು? ಸುಮ್ಮನೆ ಕಳಿಸಿದ್ರಾ? ಬೆಂಗಳೂರಿನ ಏಟ್ರಿಯಾ ಹೋಟೆಲ್ ಗೆ ವ್ಯಾಪಾರ ಮಾಡಲು ಇವರ ಬೆಂಬಲಿಗರನ್ನ ಕಳುಹಿಸಿ ನಂತರ ಸಿಲುಕಿಕೊಂಡ ಮೇಲೆ ಚೆಕ್ ಮಾಡಲು ಕಳುಹಿಸಿದ್ದೆ ಎಂದಿದ್ದಾರೆ.

ಇಂತಹವರು ಆಣೆ, ಪ್ರಮಾಣ ಬೇರೆ ಮಾಡ್ತಿನಿ ಅಂತಾರಾ? ಅವರ ಆತ್ಮ ಗೌರವಕ್ಕೆ ಒಪ್ಪುವಂತ ಕೆಲಸ ಮಾಡಬೇಕು.
ಸುಮಲತಾ ಅವರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ನಾನು ಹೇಳ್ತಿಲ್ಲ, ಆದ್ರೆ ಅವರ ಸುತ್ತ ಇರುವವರು ಈ ರೀತಿ ದಲ್ಲಾಳಿಗಳ ಕೆಲಸ ಮಾಡ್ತಿದ್ದಾರೆಂದು ಆರೋಪಿಸಿದರು.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024