ಮಗಳ ಹೆರಿಗೆ ಹಿನ್ನೆಲೆ ಬಳ್ಳಾರಿಗೆ ತೆರಳಲು ಅನುಮತಿ ಕೋರಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಒಂದು ತಿಂಗಳ ಕಾಲಾವಕಾಶ ನೀಡಿದೆ.
ಈ ಬಗ್ಗೆ ಇಂದು ತೀರ್ಪು ನೀಡಿದ ನ್ಯಾ. ಎಂ.ಆರ್.ಶಾ ಅವರ ಪೀಠ, ನವೆಂಬರ್ 6 ರ ವರೆಗೆ ಭೇಟಿ ನೀಡಲು ಮತ್ತು ವಾಸ್ತವ್ಯ ಹೂಡಲು ಅನುಮತಿ ನೀಡಿದೆ.ಇದನ್ನು ಓದಿ –ಡಿಕೆಶಿ ಕೈಹಿಡಿದು ಪಾದಯಾತ್ರೆಯಲ್ಲಿ ಓಡಿದ ರಾಹುಲ್ : ಕಾಲು ಉಳುಕಿಸಿಕೊಂಡ ನಾಯಕ
ಮಗಳ 2ನೇ ಹೆರಿಗೆ ಹಿನ್ನೆಲೆ 2 ತಿಂಗಳ ಕಾಲ ಮಗಳ ಜೊತೆಗೆ ಇರಬೇಕಿದೆ. ಇದಕ್ಕಾಗಿ ಬಳ್ಳಾರಿಗೆ ತೆರಳಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು. ಆದರೆ ಅನುಮತಿ ನೀಡಲು ಸಿಬಿಐ ವಿರೋಧ ವ್ಯಕ್ತಪಡಿಸಿತ್ತು. 2 ತಿಂಗಳ ಕಾಲ ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿದ್ದರೆ ಸಾಕ್ಷಿಗಳ ಮೇಲೆ ಪರಿಣಾಮ ಬೀರಬಹುದು ಎಂದು ಆಕ್ಷೇಪ ವ್ಯಕ್ತಪಡಿಸಿತ್ತು.
ಸಿಬಿಐ ಆಕ್ಷೇಪದ ಬಳಿಕ ಕನಿಷ್ಠ 1 ತಿಂಗಳ ಕಾಲವಾದರೂ ಅನುಮತಿ ನೀಡಬೇಕು ಮತ್ತು ನನ್ನ ಮೇಲೆ ಪೊಲೀಸ್ ನಿಗಾ ಇಡಬಹುದು ಎಂದು ಜನಾರ್ದನ ರೆಡ್ಡಿ ಪರ ವಕೀಲರುಕೇಳಿಕೊಂಡಿದ್ದರು. ವಾದ ಪ್ರತಿವಾದ ಆಲಿಸಿದ್ದ ಕೋರ್ಟ್ ಆದೇಶ ಕಾಯ್ದಿರಿಸಿತ್ತು. ಈ ಆದೇಶವನ್ನು ಇಂದು ಪ್ರಕಟಿಸಿದೆ.
ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಪ್ರತಿನಿತ್ಯ ವಿಚಾರಣೆಯನ್ನು ನಡೆಸುವಂತೆ ಮತ್ತು ನವೆಂಬರ್ 9 ರಿಂದ 6 ತಿಂಗಳಲ್ಲಿ ಸಂಪೂರ್ಣ ವಿಚಾರಣೆ ಪೂರ್ಣಗೊಳಿಸಲು ಕೇಳಿ ಹಂತದ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಈ ಹಿಂದೆ ಬಳ್ಳಾರಿ ತೆರಳಲು ನಿರ್ಬಂಧಿಸಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು