ಮಗಳ ಹೆರಿಗೆಗಾಗಿ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಹೋಗಲು ಸುಪ್ರೀಂ ಅನುಮತಿ

Team Newsnap
1 Min Read
Bellary Reddy taunts BJP - Kalyana Rajya Pragati Party. Installation ಬಿಜೆಪಿಗೆ ಸೆಡ್ಡು ಹೊಡೆದ ಬಳ್ಳಾರಿ ರೆಡ್ಡಿ - ಕಲ್ಯಾಣ ರಾಜ್ಯ ಪ್ರಗತಿ ಪಕ್ಷ. ಸ್ಥಾಪನೆ

ಮಗಳ ಹೆರಿಗೆ ಹಿನ್ನೆಲೆ ಬಳ್ಳಾರಿಗೆ ತೆರಳಲು ಅನುಮತಿ ಕೋರಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಒಂದು ತಿಂಗಳ ಕಾಲಾವಕಾಶ ನೀಡಿದೆ.

ಈ ಬಗ್ಗೆ ಇಂದು ತೀರ್ಪು ನೀಡಿದ ನ್ಯಾ. ಎಂ.ಆರ್.ಶಾ ಅವರ ಪೀಠ, ನವೆಂಬರ್ 6 ರ ವರೆಗೆ ಭೇಟಿ ನೀಡಲು ಮತ್ತು ವಾಸ್ತವ್ಯ ಹೂಡಲು ಅನುಮತಿ ನೀಡಿದೆ.ಇದನ್ನು ಓದಿ –ಡಿಕೆಶಿ ಕೈಹಿಡಿದು ಪಾದಯಾತ್ರೆಯಲ್ಲಿ ಓಡಿದ ರಾಹುಲ್ : ಕಾಲು ಉಳುಕಿಸಿಕೊಂಡ ನಾಯಕ

ಮಗಳ 2ನೇ ಹೆರಿಗೆ ಹಿನ್ನೆಲೆ 2 ತಿಂಗಳ ಕಾಲ ಮಗಳ ಜೊತೆಗೆ ಇರಬೇಕಿದೆ. ಇದಕ್ಕಾಗಿ ಬಳ್ಳಾರಿಗೆ ತೆರಳಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು. ಆದರೆ ಅನುಮತಿ ನೀಡಲು ಸಿಬಿಐ ವಿರೋಧ ವ್ಯಕ್ತಪಡಿಸಿತ್ತು. 2 ತಿಂಗಳ ಕಾಲ ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿದ್ದರೆ ಸಾಕ್ಷಿಗಳ ಮೇಲೆ ಪರಿಣಾಮ ಬೀರಬಹುದು ಎಂದು ಆಕ್ಷೇಪ ವ್ಯಕ್ತಪಡಿಸಿತ್ತು.

ಸಿಬಿಐ ಆಕ್ಷೇಪದ ಬಳಿಕ ಕನಿಷ್ಠ 1 ತಿಂಗಳ ಕಾಲವಾದರೂ ಅನುಮತಿ ನೀಡಬೇಕು ಮತ್ತು ನನ್ನ ಮೇಲೆ ಪೊಲೀಸ್ ನಿಗಾ ಇಡಬಹುದು ಎಂದು ಜನಾರ್ದನ ರೆಡ್ಡಿ ಪರ ವಕೀಲರುಕೇಳಿಕೊಂಡಿದ್ದರು. ವಾದ ಪ್ರತಿವಾದ ಆಲಿಸಿದ್ದ ಕೋರ್ಟ್ ಆದೇಶ ಕಾಯ್ದಿರಿಸಿತ್ತು. ಈ ಆದೇಶವನ್ನು ಇಂದು ಪ್ರಕಟಿಸಿದೆ. 

ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಪ್ರತಿನಿತ್ಯ ವಿಚಾರಣೆಯನ್ನು ನಡೆಸುವಂತೆ ಮತ್ತು ನವೆಂಬರ್ 9 ರಿಂದ 6 ತಿಂಗಳಲ್ಲಿ ಸಂಪೂರ್ಣ ವಿಚಾರಣೆ ಪೂರ್ಣಗೊಳಿಸಲು ಕೇಳಿ ಹಂತದ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಈ ಹಿಂದೆ ಬಳ್ಳಾರಿ ತೆರಳಲು ನಿರ್ಬಂಧಿಸಿತ್ತು.

Share This Article
Leave a comment